ಜಿಲ್ಲೆಗಳು

ತಿ.ನರಸೀಪುರ : ಮುಸುವಿನ‌ಕೊಪ್ಪಲು ಗ್ರಾಮದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ತಿ.ನರಸೀಪುರ :  -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ.

ತಾಲೂಕಿನಾದ್ಯಂತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಚಿರತೆ ಚಲನ ವಲನಗಳನ್ನು ಗುರುತಿಸಿ ವಿವಿಧ ಗ್ರಾಮಗಳ ಆಯ್ದ ಸ್ಥಳಗಳಲ್ಲಿ ಚಿರತೆ ಸೆರೆಗೆ ಬೋನುಗಳನ್ನು ಇರಿಸಿದ್ದರು. ತಾಯಿ ಹಾಗೂ ಮರೀಚಿರತೆ ಬೋನಿಗೆ ಬೀಳುವ ಮೂಲಕ ಮತ್ತೊಂದು ಮರಿ ಚಿರತೆ ಇದೆ ಎಂಬ ಆತಂಕ ಎಲ್ಲರಲ್ಲಿ ಮನೆ ಮೂಡಿತ್ತು, ಈಗ ಆ ಮರಿಚಿರತೆ ಇಂದು ಬೋನಿಗೆ ಬೀಳುವ ಮೂಲಕ ನಾಗರಿಕಲ್ಲಿ ಮೂಡಿರುವ ಆತಂಕ ಸ್ವಲ್ಪಮಟ್ಟಿಗೆ ವಿರಾಮ ದೊರಕಿದಂತಾಗಿದೆ,

ಇಂದು‌ ಸಂಜೆ ಗ್ರಾಮದ ಚಂದ್ರಪ್ಪ ಎಂಬುವರ ಜಮೀನಿನಲ್ಲಿ ಇಟ್ಟಿದ್ದ ಭೂಮಿನೊಳಗೆ ಮೇಕೆ ಮರಿ ಕಟ್ಟಿ ಹಾಕಲಾಗಿತ್ತು ಅದನ್ನು ತಿನ್ನಲು ಬಂದ ಎಂಟು ತಿಂಗಳ ಮರಿ ಚಿರತೆ ಸರಿಯಾಗಿದೆ, ಸೆರೆ ಸಿಕ್ಕ ಚಿಗತೆಮರಿಯನ್ನು ರಾತ್ರಿಯೇ ಮೈಸೂರು ಅರಣ್ಯ ಭವನಕ್ಕೆ ಸಾಗಿಸಲಾಯಿತು ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ, ನಂತರ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದಿನ ಕ್ರಮ ಜರಿಸಲಾಗುವುದು,

ಸ್ಥಳಕ್ಕೆ ತಿ. ನರಸೀಪುರ ವಲಯ ಅರಣಾಧಿಕಾರಿ ಸಯಿದ್ ನದೀಮ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಚಿರತೆ ಬಲೆಗೆ ಬಿದ್ದ ಸುದ್ದಿ ಹಬ್ಬುತ್ತಿದ್ದಂತೆ ಗ್ರಾಮಸ್ಥರು ರಾತ್ರಿ ವೇಳೆಯಾದರೂ ಚಿರತೆಯನ್ನು ವೀಕ್ಷಣೆ ಮಾಡಲು ಜಮಾವಣೆಗೊಂಡಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago