ಜಿಲ್ಲೆಗಳು

ತಿ. ನರಸೀಪುರ: ಚಿರತೆ ದಾಳಿಗೆ 3ನೇ ಸಾವು

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ

ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,

ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

3 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

3 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

3 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

3 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

4 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

4 hours ago