ಜಿಲ್ಲೆಗಳು

ತಿ. ನರಸೀಪುರ: ಚಿರತೆ ದಾಳಿಗೆ 3ನೇ ಸಾವು

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ

ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,

ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,

andolanait

Recent Posts

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌

ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್‌, ಪ್ರಶಾಂತ್‌, ಚೇತನ್‌…

4 mins ago

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

40 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

44 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

2 hours ago