ಜಿಲ್ಲೆಗಳು

ತಿ. ನರಸೀಪುರ: ಚಿರತೆ ದಾಳಿಗೆ 3ನೇ ಸಾವು

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ

ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,

ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,

andolanait

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

53 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

1 hour ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago