ಜಿಲ್ಲೆಗಳು

ತಿ. ನರಸೀಪುರ: ಚಿರತೆ ದಾಳಿಗೆ 3ನೇ ಸಾವು

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ

ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,

ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago