ಜಿಲ್ಲೆಗಳು

ತಿ. ನರಸೀಪುರ: ಚಿರತೆ ದಾಳಿಗೆ 3ನೇ ಸಾವು

ಹಿತ್ತಲಿಗೆ ಸೌದೆ ತರಲು ಹೋಗಿದ್ದ ಸಿದ್ದಮ್ಮ ಮೇಲೆ ದಾಳಿ

ತಿ.ನರಸೀಪುರ : ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದ ಸಿದ್ದಮ್ಮ‌60 ಎಂಬುವರ ಮೇಲೆ ಚಿರತೆ ದಾಳಿ ಮಾಡಿ ಕೊಂದಿದ್ದು, ತಾಲ್ಲೂಕಿನಲ್ಲಿ ಮೂರನೇ ಬಲಿಯಾಗಿದೆ,
ಗ್ರಾಮದ ಸಿದ್ದಮ್ಮ ರವರು ಸಂಜೆ 6:40ರಲ್ಲಿ ತಮ್ಮ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಶುಕ್ರವಾರ ಸಂಜೆ ಸೌದೆ ತರಲು ಹೋಗಿದ್ದ ವೇಳೆ ಚಿರತೆ ಅವರ ಮೇಲೆ ದಾಳಿ ಮಾಡಿ ಮುಖ ಹಾಗೂ ಕತ್ತಿನ ಭಾಗವನ್ನು ಗಾಯಗೊಳಿಸಿದೆ. ಸಿದ್ದಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ,
ಈಗಾಗಲೇ ಎರಡು ಬಲಿ ಪಡೆದಿದ್ದ ಚಿರತೆಯನ್ನು ಉಕ್ಕಲಗೆರೆ ಬೆಟ್ಟ ಹಾಗೂ ಮುತ್ತತ್ತಿ ಬಳಿ ಸೆರೆ ಹಿಡಿದಿದ್ದ ಕಾರಣ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಘಟನೆ ನಡೆದಿರುವುದು ಜನರನ್ನು ಭಯಬೀಳಿಸಿದೆ,
ತಾಲ್ಲೂಕಿನ ಎಂ. ಎಲ್. ಹುಂಡಿಯ ಯುವಕ ಮಂಜುನಾಥ್, ಎಸ್. ಕೆಬ್ಬೆ ಹುಂಡಿ ಗ್ರಾಮದ ಯುವತಿ ಮೇಘನ ಚಿರತೆ ದಾಳಿಗೆ ಸಾವನ್ನಪ್ಪಿದವರಾಗಿದ್ದಾರೆ, ಈಗ ಕನ್ನಾಯಕನಹಳ್ಳಿ ಗ್ರಾಮದ ಸಿದ್ದಮ್ಮ ಚಿರತೆ ದಾಳಿಗೆ 3ನೇ ಬಲಿಯಾಗಿದೆ,
ತಾಲ್ಲೂಕಿನಲ್ಲಿ ಮತ್ತೆ ಮುಂದುವರೆದ ಚಿರತೆ ಅಟ್ಟಹಾಸ.
ತಾಲ್ಲೂಕಿನ ಕನ್ನನಾಯಕನಹಳ್ಳಿ ಗ್ರಾಮದಲ್ಲಿ ಘಟನೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಾತ್ರಿ ವೇಳೆ ಹೊರಬರಲು ಭಯ ಭೀತಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ,

ಕನ್ನನಾಯಕನಹಳ್ಳಿ ಗ್ರಾಮದ
ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ಘಟನೆ ನಡೆದ ಸ್ಥಳಕ್ಕೆ ತಡವಾಗಿ ಆಗಮಿಸದ ಅಧಿಕಾರಿಗಳನ್ನು ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು,
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ವಲಯ ಅರಣ್ಯಾಧಿಕಾರಿ ಸೈಯದ್ ನದೀಮ್, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.
————————
ಘಟನಾ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿ, ಸರ್ಕಾರಿಂದ ದೊರೆಯಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು, ಚಿರತೆ ದಾಳಿ ಬಗ್ಗೆ ಅಧಿವೇಶದಲ್ಲಿ ಚರ್ಚೆ ಮಾಡಿ, ಸರ್ಕಾರದ ಗಮನ ಸೆಳೆದಿದ್ದರು, ಸರ್ಕಾರ ತೀವ್ರ ನಿರ್ಲಕ್ಷ ವಹಿಸಿದ ಪರಿಣಾಮ ಈ ಘಟನೆ ನಡೆದಿದೆ, ಅರಣ್ಯ ಇಲಾಖೆಯವರು ಇತ್ತೀಚೆಗೆ ಎಂ ಎಲ್ ಹುಂಡಿಯಲ್ಲಿ ಸೆರೆಹಿಡಿದ ಚಿರತೆಯನ್ನು ಡಿಎನ್ಎ ಪರೀಕ್ಷೆ ಮಾಡಿದಾಗ ಮನುಷ್ಯರ ಮೇಲೆ ದಾಳಿ ಮಾಡಿದ ಚಿರತೆ ಆಗಿದೆ ಎಂದು ತಿಳಿಸಿದ್ದಾರೆ,
ಜಿಲ್ಲಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ತಾಲೂಕಿನಲ್ಲಿ ಎಲ್ಲೆಲ್ಲಿ ಚಿರತೆ ಹಾವಳಿ ಇದೆ ಎಂಬುದನ್ನು ಪರಿಶೀಲನೆ ಮಾಡಿ, ಚಿರತೆ ಸೆರೆಹಿಡಿಯುವವರೆಗೂ ಗ್ರಾಮಗಳಿಂದ ಅಧಿಕಾರಿಗಳು ತೆರಳದಂತೆ ಸೂಚನೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ,
— ಶಾಸಕ ಎಂ ಅಶ್ವಿನ್ ಕುಮಾರ್,

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago