ಜಿಲ್ಲೆಗಳು

ಟಿ.ನರಸೀಪುರ : ಶೌಚಕ್ಕೆ ತೆರಳಿದ್ದ ಬಾಲಕನ ಎಳೆದೊಯ್ದ ಚಿರತೆ

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 ವರ್ಷದ ಬಾಲಕ ಜಯಂತ್ ಕಳೆದ ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಹೋಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಎಳೆದೊಯ್ದಿದೆ. ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ರಾತ್ರಿಯಿಡೀ ಶೋಧ ಕೈಗೊಂಡಿದ್ದಾರೆ. ಆದ್ರೆ ಬಾಲಕ ಪತ್ತೆಯಾಗಿಲ್ಲ. ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾತ್ರಿಯೇ ಸ್ಥಳಕ್ಕೆ ಶಾಸಕರು ಮತ್ತು ಡಿಸಿ ಆಗಮಿಸಿದ್ದರು.

ಗ್ರಾಮಕ್ಕೆ ರಾತ್ರಿಯೇ ಶಾಸಕ, ಡಿಸಿ ಭೇಟಿ:

ವಿಷಯ ಗೊತ್ತಾಗುತ್ತಿದ್ದಂತೆ ಶಾಸಕ ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಗ್ರಾಮಕ್ಕೆ ಆಗಮಿಸಿ, ಜನರಿಗೆ ಧೈರ್ಯ ತುಂಬಿದರು. ಚಿರತೆ ಹಾವಳಿಯಿಂದ ಜನರು ಆಕ್ರೋಶಗೊಂಡಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅರಣ್ಯಾಧಿಕಾರಿಗಳು ಕೂಡ ಸ್ಥಳದಲ್ಲಿದ್ದರು.

ಚಿರತೆಗೆ 2 ತಿಂಗಳಲ್ಲಿ ನಾಲ್ವರು ಬಲಿ:

ಮೈಸೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಚಿರತೆ ದಾಳಿ ಹೆಚ್ಚುತ್ತಿದೆ. ಮೈಸೂರಲ್ಲೇ ಎರಡು ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 

andolanait

Recent Posts

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

11 mins ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

1 hour ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

2 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

3 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

3 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

4 hours ago