ಜಿಲ್ಲೆಗಳು

ಟಿ.ನರಸೀಪುರ : ಶೌಚಕ್ಕೆ ತೆರಳಿದ್ದ ಬಾಲಕನ ಎಳೆದೊಯ್ದ ಚಿರತೆ

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 ವರ್ಷದ ಬಾಲಕ ಜಯಂತ್ ಕಳೆದ ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಹೋಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಎಳೆದೊಯ್ದಿದೆ. ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ರಾತ್ರಿಯಿಡೀ ಶೋಧ ಕೈಗೊಂಡಿದ್ದಾರೆ. ಆದ್ರೆ ಬಾಲಕ ಪತ್ತೆಯಾಗಿಲ್ಲ. ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾತ್ರಿಯೇ ಸ್ಥಳಕ್ಕೆ ಶಾಸಕರು ಮತ್ತು ಡಿಸಿ ಆಗಮಿಸಿದ್ದರು.

ಗ್ರಾಮಕ್ಕೆ ರಾತ್ರಿಯೇ ಶಾಸಕ, ಡಿಸಿ ಭೇಟಿ:

ವಿಷಯ ಗೊತ್ತಾಗುತ್ತಿದ್ದಂತೆ ಶಾಸಕ ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಗ್ರಾಮಕ್ಕೆ ಆಗಮಿಸಿ, ಜನರಿಗೆ ಧೈರ್ಯ ತುಂಬಿದರು. ಚಿರತೆ ಹಾವಳಿಯಿಂದ ಜನರು ಆಕ್ರೋಶಗೊಂಡಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅರಣ್ಯಾಧಿಕಾರಿಗಳು ಕೂಡ ಸ್ಥಳದಲ್ಲಿದ್ದರು.

ಚಿರತೆಗೆ 2 ತಿಂಗಳಲ್ಲಿ ನಾಲ್ವರು ಬಲಿ:

ಮೈಸೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಚಿರತೆ ದಾಳಿ ಹೆಚ್ಚುತ್ತಿದೆ. ಮೈಸೂರಲ್ಲೇ ಎರಡು ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

49 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago