ಜಿಲ್ಲೆಗಳು

ಟಿ.ನರಸೀಪುರ : ಶೌಚಕ್ಕೆ ತೆರಳಿದ್ದ ಬಾಲಕನ ಎಳೆದೊಯ್ದ ಚಿರತೆ

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 ವರ್ಷದ ಬಾಲಕ ಜಯಂತ್ ಕಳೆದ ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಹೋಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಎಳೆದೊಯ್ದಿದೆ. ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ರಾತ್ರಿಯಿಡೀ ಶೋಧ ಕೈಗೊಂಡಿದ್ದಾರೆ. ಆದ್ರೆ ಬಾಲಕ ಪತ್ತೆಯಾಗಿಲ್ಲ. ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾತ್ರಿಯೇ ಸ್ಥಳಕ್ಕೆ ಶಾಸಕರು ಮತ್ತು ಡಿಸಿ ಆಗಮಿಸಿದ್ದರು.

ಗ್ರಾಮಕ್ಕೆ ರಾತ್ರಿಯೇ ಶಾಸಕ, ಡಿಸಿ ಭೇಟಿ:

ವಿಷಯ ಗೊತ್ತಾಗುತ್ತಿದ್ದಂತೆ ಶಾಸಕ ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಗ್ರಾಮಕ್ಕೆ ಆಗಮಿಸಿ, ಜನರಿಗೆ ಧೈರ್ಯ ತುಂಬಿದರು. ಚಿರತೆ ಹಾವಳಿಯಿಂದ ಜನರು ಆಕ್ರೋಶಗೊಂಡಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅರಣ್ಯಾಧಿಕಾರಿಗಳು ಕೂಡ ಸ್ಥಳದಲ್ಲಿದ್ದರು.

ಚಿರತೆಗೆ 2 ತಿಂಗಳಲ್ಲಿ ನಾಲ್ವರು ಬಲಿ:

ಮೈಸೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಚಿರತೆ ದಾಳಿ ಹೆಚ್ಚುತ್ತಿದೆ. ಮೈಸೂರಲ್ಲೇ ಎರಡು ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

14 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

17 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

17 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

18 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

19 hours ago