ಜಿಲ್ಲೆಗಳು

ಟಿ.ನರಸೀಪುರ : ಶೌಚಕ್ಕೆ ತೆರಳಿದ್ದ ಬಾಲಕನ ಎಳೆದೊಯ್ದ ಚಿರತೆ

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 ವರ್ಷದ ಬಾಲಕ ಜಯಂತ್ ಕಳೆದ ರಾತ್ರಿ ಬಯಲು ಶೌಚಕ್ಕಾಗಿ ಮನೆಯಿಂದ ಹೊರ ಹೋಗಿದ್ದ. ಈ ವೇಳೆ ಚಿರತೆ ದಾಳಿ ಮಾಡಿ ಎಳೆದೊಯ್ದಿದೆ. ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ರಾತ್ರಿಯಿಡೀ ಶೋಧ ಕೈಗೊಂಡಿದ್ದಾರೆ. ಆದ್ರೆ ಬಾಲಕ ಪತ್ತೆಯಾಗಿಲ್ಲ. ಗ್ರಾಮದಲ್ಲಿ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ರಾತ್ರಿಯೇ ಸ್ಥಳಕ್ಕೆ ಶಾಸಕರು ಮತ್ತು ಡಿಸಿ ಆಗಮಿಸಿದ್ದರು.

ಗ್ರಾಮಕ್ಕೆ ರಾತ್ರಿಯೇ ಶಾಸಕ, ಡಿಸಿ ಭೇಟಿ:

ವಿಷಯ ಗೊತ್ತಾಗುತ್ತಿದ್ದಂತೆ ಶಾಸಕ ಅಶ್ವಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಗ್ರಾಮಕ್ಕೆ ಆಗಮಿಸಿ, ಜನರಿಗೆ ಧೈರ್ಯ ತುಂಬಿದರು. ಚಿರತೆ ಹಾವಳಿಯಿಂದ ಜನರು ಆಕ್ರೋಶಗೊಂಡಿದ್ದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅರಣ್ಯಾಧಿಕಾರಿಗಳು ಕೂಡ ಸ್ಥಳದಲ್ಲಿದ್ದರು.

ಚಿರತೆಗೆ 2 ತಿಂಗಳಲ್ಲಿ ನಾಲ್ವರು ಬಲಿ:

ಮೈಸೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಚಿರತೆ ದಾಳಿ ಹೆಚ್ಚುತ್ತಿದೆ. ಮೈಸೂರಲ್ಲೇ ಎರಡು ತಿಂಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 

andolanait

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

15 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 days ago