Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ತಹಸಿಲ್ದಾರ್ ದರ್ಜೆಯ 71 ಅಧಿಕಾರಿಗಳಿಗೆ ಮುಂಬಡ್ತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಹಾಗೂ ಕೆ.ಜಾನ್ಸನ್, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಸೇರಿದಂತೆ ೭೧ ಮಂದಿ ತಹಸಿಲ್ದಾರ್ ಗ್ರೇಡ್ ೧ ವೃಂದದ ಅಧಿಕಾರಿಗಳಿಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಆಡಳಿತ ಸೇವೆ (ಕಿರಿಯ ಶ್ರೇಣಿ) ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಅವರನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಕೆ.ಜಾನ್ಸನ್ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ ಅವರನ್ನು ಮೈಸೂರು ಮಹಾನಗರಪಾಲಿಕೆ ವಲಯ ಆಯುಕ್ತರ ಹುದ್ದೆಗೆ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್ ಅವರನ್ನು ಜಲಾನಯನ ಇಲಾಖೆ, ಕಾವೇರಿ ಜಲಾನಯನ ಅಭಿವೃದ್ಧಿ ಮಂಡಳಿಯ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಅವರನ್ನು ಬೆಂಗಳೂರಿನ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ರಿಜಿಸ್ಟ್ರಾರ್ ಹುದ್ದೆಗೆ ಸ್ಥಳ ನಿಯುಕ್ತಿ ಮಾಡಲಾಗಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳನ್ನು ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಉಮಾದೇವಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!