ಜಿಲ್ಲೆಗಳು

ತಹಸಿಲ್ದಾರ್ ದರ್ಜೆಯ 71 ಅಧಿಕಾರಿಗಳಿಗೆ ಮುಂಬಡ್ತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಹಾಗೂ ಕೆ.ಜಾನ್ಸನ್, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಸೇರಿದಂತೆ ೭೧ ಮಂದಿ ತಹಸಿಲ್ದಾರ್ ಗ್ರೇಡ್ ೧ ವೃಂದದ ಅಧಿಕಾರಿಗಳಿಗೆ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಆಡಳಿತ ಸೇವೆ (ಕಿರಿಯ ಶ್ರೇಣಿ) ಹುದ್ದೆಗೆ ಸ್ಥಾನಾಪನ್ನ ಬಡ್ತಿ ನೀಡಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತಹಸಿಲ್ದಾರ್ ಆರ್.ಮಂಜುನಾಥ್ ಅವರನ್ನು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಕೆ.ಜಾನ್ಸನ್ ಅವರನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಹುದ್ದೆಗೆ, ಪಿರಿಯಾಪಟ್ಟಣ ತಹಸಿಲ್ದಾರ್ ಕೆ.ಚಂದ್ರಮೌಳಿ ಅವರನ್ನು ಮೈಸೂರು ಮಹಾನಗರಪಾಲಿಕೆ ವಲಯ ಆಯುಕ್ತರ ಹುದ್ದೆಗೆ, ಸ್ಥಳ ನಿರೀಕ್ಷಣೆಯಲ್ಲಿದ್ದ ಜೆ.ಮಹೇಶ್ ಅವರನ್ನು ಜಲಾನಯನ ಇಲಾಖೆ, ಕಾವೇರಿ ಜಲಾನಯನ ಅಭಿವೃದ್ಧಿ ಮಂಡಳಿಯ ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಎನ್.ಕೆ.ನಿಶ್ಚಯ್ ಅವರನ್ನು ಬೆಂಗಳೂರಿನ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ರಿಜಿಸ್ಟ್ರಾರ್ ಹುದ್ದೆಗೆ ಸ್ಥಳ ನಿಯುಕ್ತಿ ಮಾಡಲಾಗಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳನ್ನು ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಈ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳ ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಉಮಾದೇವಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago