ಮೈಸೂರು: ಜೆಎನ್ 1 ಹೊಸ ತಳಿಯ ಕೋವಿಡ್ ಕಂಡು ಬರುತ್ತಿದ್ದು, ಹೊಸ ತಳಿಗೆ ಚಿಕಿತ್ಸೆ ನೀಡಲು ಹಾಗೂ ಹರಡದಂತೆ ತಡೆಗಟ್ಟಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ ಅವರು ತಿಳಿಸಿದರು.
ನಗರದ ಬಾಬು ಜಗಜೀವನ್ ರಾಂ ಭವನದಲ್ಲಿ ಕೋವಿಡ್ ನಿರ್ವಹಣೆ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಜೆಎನ್1 ಹೊಸ ತಳಿಯ ಕೋವಿಡ್ ಹರಡುತ್ತಿದ್ದು ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
60 ವರ್ಷ ಮೇಲ್ಪಟ್ಟ ವರು, ಹೃದಯ ಸಂಬಂಧಿ ಕಾಯಿಲೆ ಗಳು ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಲಕ್ಷಣ ಇರುವವರು ಕೊವಿಡ್ ಟೆಸ್ಟ್ ಮಾಡಿಸಬೇಕು ಎಂಬ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ.
ಕೇರಳ ಮತ್ತು ತಮಿಳುನಾಡು ಚೆಕ್ ಪೋಸ್ಟ್ ಗಳಲ್ಲಿ ಅವರಿಗೆ ಅರ್ಥ ಆಗುವ ಭಾಷೆಯಲ್ಲಿ ಕೋವಿಡ್ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿಯನ್ನು ಪ್ರದರ್ಶನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ 5 ಬೆಡ್ ಗಳನ್ನು ಹಾಗೂ 2 ಆಕ್ಸಿಜನ್ ವೆಂಟಿಲೇಟರ್ ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು. ಕೋವಿಡ್ ಹೆಚ್ಚಾದಾಗ ಕೈಗೊಳ್ಳಬೇಕಾದ ಕುರಿತು ಮಾಕ್ ಡ್ರಿಲ್ ಮಾಡಿ.
ಮುಂದಿನ ಒಂದು ವಾರದ ನಂತರ ದಿನಕ್ಕೆ ಕನಿಷ್ಟ 1000 ಕೋವಿಡ್ ಟೆಸ್ಟ್ ಮಾಡುವ ಹಾಗೆ ಯೋಜನೆ ರೂಪಿಸಿಕೊಳ್ಳಿ. ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ದೊರೆಯುವಂತೆ, ಜಂಬೋ ಸಿಲಿಂಡರ್ ಗಳು ಇರುವಂತೆ ನೋಡಿಕೊಳ್ಳಬೇಕು. ಅಗತ್ಯ ಮೆಡಿಷಿನ್ ಇರುವಂತೆ ಆರೋಗ್ಯ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಪಾಂಪ್ಲೆಟ್ ಗಳನ್ನು ಪ್ರದರ್ಶಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…