ಜಿಲ್ಲೆಗಳು

ಕನ್ನಡತನ ಉಳಿಸಿಕೊಂಡಿರುವ ತಾಳವಾಡಿ ಕನ್ನಡಿಗರು

ತಮಿಳುನಾಡು ಕನ್ನಡ ಜಾನಪದ ಪರಿಷತ್ ಉದ್ಘಾಟನೆ

ಚಾಮರಾಜನಗರ: ತಾಳವಾಡಿ ತಾಲೂಕಿನ ಹತ್ತಾರು ಗ್ರಾಮಗಳಲ್ಲಿರುವ ಕನ್ನಡಿಗರು ತಮ್ಮ ಮೂಲ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಕಡೆ ಕನ್ನಡ ಜಾನಪದ ಪರಿಷತ್ ಘಟಕ ಸ್ಥಾಪಿಸಿರುವುದು ಹೆಮ್ಮೆಯ ವಿಚಾರ ಎಂದು ತಾಳವಾಡಿ ಕನ್ನಡ ಸಂಘದ ಅಧ್ಯಕ್ಷರಾದ ಎಸ್ ಚೆನ್ನಂಜಪ್ಪ ತಿಳಿಸಿದರು.
ತಮಿಳುನಾಡಿಗೆ ಸೇರಿದ ಗಾಜನೂರಿನಲ್ಲಿರುವ ವರನಟ ರಾಜಕುಮಾರ್ ಮನೆಯ ಮುಂಭಾಗ ತಮಿಳುನಾಡು ಕನ್ನಡ ಜಾನಪದ ಪರಿಷತ್ತಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ತಾಳವಾಡಿ ಭಾಗದಲ್ಲಿ ಕನ್ನಡಿಗರಿದ್ದ ಹತ್ತಾರು ಗ್ರಾಮಗಳು ತಮಿಳುನಾಡಿಗೆ ಸೇರ್ಪಡೆಯಾದವು. ಕನ್ನಡಿಗರು ಮಾತ್ರ ತಮ್ಮ ಮೂಲ ಸಂಸ್ಕೃತಿಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ ಎಂದರು.
ಮೂಲ ಸಂಸ್ಕೃತಿಯಾದ ಜನಪದವನ್ನು ಬೆಳೆಸಲು ಇದು ಸಹಕಾರಿಯಾಗಲಿದೆ. ಈ ಕಾರ್ಯ ಮಾಡಿರುವ ಜನಪದ ಬಾಲಾಜಿ, ಸುರೇಶ್ ಋಗ್ವೇದಿ, ಸುರೇಶನಾಗ್ ಅಭಿನಂದನೆಗೆ ಅರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಬಾಲಾಜಿ ಮಾತನಾಡಿ, ಕನ್ನಡ ಜಾನಪದ ಪರಿಷತ್ ಘಟಕಗಳನ್ನು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲೂ ಸ್ಥಾಪಿಸಲಾಗಿದೆ. ತಮಿಳುನಾಡಿನ ಡಾ.ರಾಜಕುಮಾರ್ ಮನೆಯ ಮುಂಭಾಗ ಜಾನಪದ ಪರಿಷತ್ ಸ್ಥಾಪನೆಯಾಗಿರುವುದು ಮೆಚ್ಚಿನ ಸಂಗತಿ ಎಂದರು.
ಪ್ರತಿ ವರ್ಷ ಗಡಿ ಕನ್ನಡಿಗರ ಸಮಾವೇಶ ಹಾಗೂ ಗಡಿ ಕನ್ನಡಿಗ ಹೊರ ಕನ್ನಡಿಗರ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಚರಿಸಲಾಗುವುದು. ಜಾನಪದ ಶ್ರೇಷ್ಠತೆಯನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ ಮತ, ಧರ್ಮ ರಾಜ್ಯಗಳ ಭೇದವಿಲ್ಲದೆ ಜನಪದ ಜಗತ್ತಿನಲ್ಲಿ ಹರಡಿದೆ ಎಂದರು.
ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್.ಋಗ್ವೇದಿ ಮಾತನಾಡಿ, ತಾಳವಾಡಿ ತಾಲ್ಲೂಕಿನ ಡಾ.ರಾಜಕುಮಾರ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಒಡನಾಡಿ ಐ.ಎನ್.ಎ. ರಾಮರಾವ್ ಅವರು ಕನ್ನಡದ ಎರಡು ಶ್ರೇಷ್ಟ ರತ್ನಗಳು ಎಂದರು.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

44 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

57 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

1 hour ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago