ಜಿಲ್ಲೆಗಳು

ಕನ್ನಡತನ ಉಳಿಸಿಕೊಂಡಿರುವ ತಾಳವಾಡಿ ಕನ್ನಡಿಗರು

ತಮಿಳುನಾಡು ಕನ್ನಡ ಜಾನಪದ ಪರಿಷತ್ ಉದ್ಘಾಟನೆ

ಚಾಮರಾಜನಗರ: ತಾಳವಾಡಿ ತಾಲೂಕಿನ ಹತ್ತಾರು ಗ್ರಾಮಗಳಲ್ಲಿರುವ ಕನ್ನಡಿಗರು ತಮ್ಮ ಮೂಲ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಕಡೆ ಕನ್ನಡ ಜಾನಪದ ಪರಿಷತ್ ಘಟಕ ಸ್ಥಾಪಿಸಿರುವುದು ಹೆಮ್ಮೆಯ ವಿಚಾರ ಎಂದು ತಾಳವಾಡಿ ಕನ್ನಡ ಸಂಘದ ಅಧ್ಯಕ್ಷರಾದ ಎಸ್ ಚೆನ್ನಂಜಪ್ಪ ತಿಳಿಸಿದರು.
ತಮಿಳುನಾಡಿಗೆ ಸೇರಿದ ಗಾಜನೂರಿನಲ್ಲಿರುವ ವರನಟ ರಾಜಕುಮಾರ್ ಮನೆಯ ಮುಂಭಾಗ ತಮಿಳುನಾಡು ಕನ್ನಡ ಜಾನಪದ ಪರಿಷತ್ತಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ತಾಳವಾಡಿ ಭಾಗದಲ್ಲಿ ಕನ್ನಡಿಗರಿದ್ದ ಹತ್ತಾರು ಗ್ರಾಮಗಳು ತಮಿಳುನಾಡಿಗೆ ಸೇರ್ಪಡೆಯಾದವು. ಕನ್ನಡಿಗರು ಮಾತ್ರ ತಮ್ಮ ಮೂಲ ಸಂಸ್ಕೃತಿಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ ಎಂದರು.
ಮೂಲ ಸಂಸ್ಕೃತಿಯಾದ ಜನಪದವನ್ನು ಬೆಳೆಸಲು ಇದು ಸಹಕಾರಿಯಾಗಲಿದೆ. ಈ ಕಾರ್ಯ ಮಾಡಿರುವ ಜನಪದ ಬಾಲಾಜಿ, ಸುರೇಶ್ ಋಗ್ವೇದಿ, ಸುರೇಶನಾಗ್ ಅಭಿನಂದನೆಗೆ ಅರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಬಾಲಾಜಿ ಮಾತನಾಡಿ, ಕನ್ನಡ ಜಾನಪದ ಪರಿಷತ್ ಘಟಕಗಳನ್ನು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲೂ ಸ್ಥಾಪಿಸಲಾಗಿದೆ. ತಮಿಳುನಾಡಿನ ಡಾ.ರಾಜಕುಮಾರ್ ಮನೆಯ ಮುಂಭಾಗ ಜಾನಪದ ಪರಿಷತ್ ಸ್ಥಾಪನೆಯಾಗಿರುವುದು ಮೆಚ್ಚಿನ ಸಂಗತಿ ಎಂದರು.
ಪ್ರತಿ ವರ್ಷ ಗಡಿ ಕನ್ನಡಿಗರ ಸಮಾವೇಶ ಹಾಗೂ ಗಡಿ ಕನ್ನಡಿಗ ಹೊರ ಕನ್ನಡಿಗರ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಚರಿಸಲಾಗುವುದು. ಜಾನಪದ ಶ್ರೇಷ್ಠತೆಯನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ ಮತ, ಧರ್ಮ ರಾಜ್ಯಗಳ ಭೇದವಿಲ್ಲದೆ ಜನಪದ ಜಗತ್ತಿನಲ್ಲಿ ಹರಡಿದೆ ಎಂದರು.
ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್.ಋಗ್ವೇದಿ ಮಾತನಾಡಿ, ತಾಳವಾಡಿ ತಾಲ್ಲೂಕಿನ ಡಾ.ರಾಜಕುಮಾರ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಒಡನಾಡಿ ಐ.ಎನ್.ಎ. ರಾಮರಾವ್ ಅವರು ಕನ್ನಡದ ಎರಡು ಶ್ರೇಷ್ಟ ರತ್ನಗಳು ಎಂದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago