ಜಿಲ್ಲೆಗಳು

ಕನ್ನಡತನ ಉಳಿಸಿಕೊಂಡಿರುವ ತಾಳವಾಡಿ ಕನ್ನಡಿಗರು

ತಮಿಳುನಾಡು ಕನ್ನಡ ಜಾನಪದ ಪರಿಷತ್ ಉದ್ಘಾಟನೆ

ಚಾಮರಾಜನಗರ: ತಾಳವಾಡಿ ತಾಲೂಕಿನ ಹತ್ತಾರು ಗ್ರಾಮಗಳಲ್ಲಿರುವ ಕನ್ನಡಿಗರು ತಮ್ಮ ಮೂಲ ಕನ್ನಡ ಸಂಸ್ಕೃತಿ, ಪರಂಪರೆಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ. ಇಂತಹ ಕಡೆ ಕನ್ನಡ ಜಾನಪದ ಪರಿಷತ್ ಘಟಕ ಸ್ಥಾಪಿಸಿರುವುದು ಹೆಮ್ಮೆಯ ವಿಚಾರ ಎಂದು ತಾಳವಾಡಿ ಕನ್ನಡ ಸಂಘದ ಅಧ್ಯಕ್ಷರಾದ ಎಸ್ ಚೆನ್ನಂಜಪ್ಪ ತಿಳಿಸಿದರು.
ತಮಿಳುನಾಡಿಗೆ ಸೇರಿದ ಗಾಜನೂರಿನಲ್ಲಿರುವ ವರನಟ ರಾಜಕುಮಾರ್ ಮನೆಯ ಮುಂಭಾಗ ತಮಿಳುನಾಡು ಕನ್ನಡ ಜಾನಪದ ಪರಿಷತ್ತಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ತಾಳವಾಡಿ ಭಾಗದಲ್ಲಿ ಕನ್ನಡಿಗರಿದ್ದ ಹತ್ತಾರು ಗ್ರಾಮಗಳು ತಮಿಳುನಾಡಿಗೆ ಸೇರ್ಪಡೆಯಾದವು. ಕನ್ನಡಿಗರು ಮಾತ್ರ ತಮ್ಮ ಮೂಲ ಸಂಸ್ಕೃತಿಯನ್ನು ಜೀವಂತವಾಗಿ ಇಟ್ಟುಕೊಂಡಿದ್ದಾರೆ ಎಂದರು.
ಮೂಲ ಸಂಸ್ಕೃತಿಯಾದ ಜನಪದವನ್ನು ಬೆಳೆಸಲು ಇದು ಸಹಕಾರಿಯಾಗಲಿದೆ. ಈ ಕಾರ್ಯ ಮಾಡಿರುವ ಜನಪದ ಬಾಲಾಜಿ, ಸುರೇಶ್ ಋಗ್ವೇದಿ, ಸುರೇಶನಾಗ್ ಅಭಿನಂದನೆಗೆ ಅರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ.ಬಾಲಾಜಿ ಮಾತನಾಡಿ, ಕನ್ನಡ ಜಾನಪದ ಪರಿಷತ್ ಘಟಕಗಳನ್ನು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲೂ ಸ್ಥಾಪಿಸಲಾಗಿದೆ. ತಮಿಳುನಾಡಿನ ಡಾ.ರಾಜಕುಮಾರ್ ಮನೆಯ ಮುಂಭಾಗ ಜಾನಪದ ಪರಿಷತ್ ಸ್ಥಾಪನೆಯಾಗಿರುವುದು ಮೆಚ್ಚಿನ ಸಂಗತಿ ಎಂದರು.
ಪ್ರತಿ ವರ್ಷ ಗಡಿ ಕನ್ನಡಿಗರ ಸಮಾವೇಶ ಹಾಗೂ ಗಡಿ ಕನ್ನಡಿಗ ಹೊರ ಕನ್ನಡಿಗರ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಚರಿಸಲಾಗುವುದು. ಜಾನಪದ ಶ್ರೇಷ್ಠತೆಯನ್ನು ನಾವೆಲ್ಲರೂ ಬೆಳೆಸಿಕೊಳ್ಳೋಣ ಮತ, ಧರ್ಮ ರಾಜ್ಯಗಳ ಭೇದವಿಲ್ಲದೆ ಜನಪದ ಜಗತ್ತಿನಲ್ಲಿ ಹರಡಿದೆ ಎಂದರು.
ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್.ಋಗ್ವೇದಿ ಮಾತನಾಡಿ, ತಾಳವಾಡಿ ತಾಲ್ಲೂಕಿನ ಡಾ.ರಾಜಕುಮಾರ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಒಡನಾಡಿ ಐ.ಎನ್.ಎ. ರಾಮರಾವ್ ಅವರು ಕನ್ನಡದ ಎರಡು ಶ್ರೇಷ್ಟ ರತ್ನಗಳು ಎಂದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago