ವರದಿ: ಮಹಾದೇಶ್ ಎಂ ಗೌಡ
ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು.
ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ ಉಚಿತ ಔಷಧಿ ಕೊಡುವ ನಾಟಿ ವೈದ್ಯನಿಗೆ ಬೇಕಿದೆ ನೆರವು. ಅದೂ, ಸ್ವಂತಕಲ್ಲ- ಸಮಾಜಸೇವೆಗೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ ಸಾಲೂರು ಮಠದ ಸಮೀಪವಿರುವ ಕಾಡು ಹೊಲ ಗ್ರಾಮದ ನಿವಾಸಿ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ- ರೋಗಿಗಳಿಗೆ ಹೊಟ್ಟೆತುಂಬಾ ಊಟ ಹಾಕಿ ಕಳುಹಿಸುತ್ತಿರುವ ಪುಟ್ಟತಮ್ಮಡಿ ಅವರು ಅಗತ್ಯ ನೆರವಿಗೆ ದಾನಿಗಳ ಮೊರೆ ಇಟ್ಟಿದ್ದಾರೆ.
ರೋಗಿಗಳು ಬಂದ ವೇಳೆ ಮಲಗಿಸಿ ಚಿಕಿತ್ಸೆ ಕೊಡಲು ಎರಡು ಕಬ್ಬಿಣದ ಮಂಚ, ದಿಂಬುಗಳನ್ನು ಕೊಟ್ಟರೇ ತನಗೆ ಎಷ್ಟೋ ಸಹಾಯಕವಾಗಲಿದೆ. ಬಂದವರಿಗೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಲು ಕೆಲವೊಮ್ಮೆ ದುಸ್ತರ ಆಗಲಿದ್ದು ಆಸಕ್ತರು ತನಗೆ ಚಿಕ್ಕ ಕೊಡುಗೆಯನ್ನು ಕೊಟ್ಟರೇ ಮಲೆ ಮಹದೇಶ್ವರನ ಒಳಿತು ಮಾಡುತ್ತಾನೆ ಎಂದು ನಿಷ್ಕಲ್ಮಶ ಬೇಡಿಕೆಯನ್ನು “ಆಂದೋಲನ”ದೊಟ್ಟಿಗೆ ಹಂಚಿಕೊಂಡಿದ್ದಾರೆ.
260 ಮಂದಿಗೆ ಚಿಕಿತ್ಸೆ: ಪುಟ್ಟ ತಮ್ಮಡಿ ಅವರು ಇಲ್ಲಿಯವರೆಗೆ 260 ಮಂದಿಗೆ ಹಾವು, ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ. ತಮ್ಮ ಬಳಿ ಚಿಕಿತ್ಸೆ ಪಡೆದ ದಿನಾಂಕ, ವಿವರವನ್ನು ಬರೆದಿಟ್ಟುಕೊಂಡು ಕಾಪಿಟ್ಟಿರುವ ಈ ನಾಟಿ ವೈದ್ಯನಿಗೆ ಆಸಕ್ತರು ನೆರವು ನೀಡಬಹುದಾಗಿದೆ. ಅಂದಹಾಗೆ, ಇವರ ತಂದೆ ಜುಟ್ಟುಮಲ್ಲಪ್ಪ ಕೂಡ ನಾಟಿ ವೈದ್ಯರಾಗಿದ್ದು ತಂದೆಯಿಂದ ಕಲಿತ ಪಾರಂಪರಿಕ ಜ್ಞಾನವನ್ನು ಮುಂದುವರೆಸಿಕೊಂಡು ಇವರು ಹೋಗುತ್ತಿದ್ದಾರೆ.
ಮಲೆಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಹತ್ತಾರು ಊರುಗಳ ಜನರು ಈಗಲೂ ಪುಟ್ಟತಮ್ಮಡಿ ಅವರ ಬಳಿ ಬರಲಿದ್ದಾರೆ.
ಮಲೆ ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡು ಹೊಲ ಗ್ರಾಮದ ಪುಟ್ಟ ತಮ್ಮಡಿ ರವರ ಸೇವೆಯನ್ನು ಗುರುತಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜನಗರ ಇವರೂ ಸಹ 2019ರಲ್ಲಿ ಸನ್ಮಾನ ಪತ್ರ ವಿತರಿಸಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…