ಜಿಲ್ಲೆಗಳು

ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು

ವರದಿ: ಮಹಾದೇಶ್ ಎಂ ಗೌಡ

ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು.

ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ ಉಚಿತ ಔಷಧಿ ಕೊಡುವ ನಾಟಿ ವೈದ್ಯನಿಗೆ ಬೇಕಿದೆ ನೆರವು. ಅದೂ, ಸ್ವಂತಕಲ್ಲ- ಸಮಾಜಸೇವೆಗೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿನ‌ ಸಾಲೂರು ಮಠದ ಸಮೀಪವಿರುವ ಕಾಡು ಹೊಲ ಗ್ರಾಮದ ನಿವಾಸಿ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ ಉಚಿತ ಔಷಧ- ರೋಗಿಗಳಿಗೆ ಹೊಟ್ಟೆತುಂಬಾ ಊಟ ಹಾಕಿ ಕಳುಹಿಸುತ್ತಿರುವ ಪುಟ್ಟತಮ್ಮಡಿ ಅವರು ಅಗತ್ಯ ನೆರವಿಗೆ ದಾನಿಗಳ ಮೊರೆ ಇಟ್ಟಿದ್ದಾರೆ.

ರೋಗಿಗಳು ಬಂದ ವೇಳೆ ಮಲಗಿಸಿ ಚಿಕಿತ್ಸೆ ಕೊಡಲು ಎರಡು ಕಬ್ಬಿಣದ ಮಂಚ, ದಿಂಬುಗಳನ್ನು ಕೊಟ್ಟರೇ ತನಗೆ ಎಷ್ಟೋ ಸಹಾಯಕವಾಗಲಿದೆ. ಬಂದವರಿಗೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಲು ಕೆಲವೊಮ್ಮೆ ದುಸ್ತರ ಆಗಲಿದ್ದು ಆಸಕ್ತರು ತನಗೆ ಚಿಕ್ಕ ಕೊಡುಗೆಯನ್ನು ಕೊಟ್ಟರೇ ಮಲೆ ಮಹದೇಶ್ವರನ ಒಳಿತು ಮಾಡುತ್ತಾನೆ ಎಂದು ನಿಷ್ಕಲ್ಮಶ ಬೇಡಿಕೆಯನ್ನು “ಆಂದೋಲನ”ದೊಟ್ಟಿಗೆ ಹಂಚಿಕೊಂಡಿದ್ದಾರೆ.

260 ಮಂದಿಗೆ ಚಿಕಿತ್ಸೆ: ಪುಟ್ಟ ತಮ್ಮಡಿ ಅವರು ಇಲ್ಲಿಯವರೆಗೆ 260 ಮಂದಿಗೆ ಹಾವು, ಚೇಳಿನ ಕಡಿತಕ್ಕೆ ಉಚಿತ ಚಿಕಿತ್ಸೆ ಕೊಟ್ಟಿದ್ದು ಎಲ್ಲರೂ ಗುಣಮುಖರಾಗಿ ತೆರಳಿದ್ದಾರೆ. ತಮ್ಮ ಬಳಿ ಚಿಕಿತ್ಸೆ ಪಡೆದ ದಿನಾಂಕ, ವಿವರವನ್ನು ಬರೆದಿಟ್ಟುಕೊಂಡು ಕಾಪಿಟ್ಟಿರುವ ಈ ನಾಟಿ ವೈದ್ಯನಿಗೆ ಆಸಕ್ತರು ನೆರವು ನೀಡಬಹುದಾಗಿದೆ. ಅಂದಹಾಗೆ, ಇವರ ತಂದೆ ಜುಟ್ಟುಮಲ್ಲಪ್ಪ ಕೂಡ ನಾಟಿ ವೈದ್ಯರಾಗಿದ್ದು ತಂದೆಯಿಂದ ಕಲಿತ ಪಾರಂಪರಿಕ ಜ್ಞಾನವನ್ನು ಮುಂದುವರೆಸಿಕೊಂಡು ಇವರು ಹೋಗುತ್ತಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಹತ್ತಾರು ಊರುಗಳ ಜನರು ಈಗಲೂ ಪುಟ್ಟತಮ್ಮಡಿ ಅವರ ಬಳಿ ಬರಲಿದ್ದಾರೆ.

ಮಲೆ ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡು ಹೊಲ ಗ್ರಾಮದ ಪುಟ್ಟ ತಮ್ಮಡಿ ರವರ ಸೇವೆಯನ್ನು ಗುರುತಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜನಗರ ಇವರೂ ಸಹ 2019ರಲ್ಲಿ ಸನ್ಮಾನ ಪತ್ರ ವಿತರಿಸಿದ್ದಾರೆ.

 

andolanait

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

8 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

14 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

15 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

16 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

17 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

17 mins ago