ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರಿಂದ ಅನಿರ್ದಿಷ್ಟ ಪ್ರತಿಭಟನೆ ಆರಂಭ
ಚಾಮರಾಜನಗರ: ಎಂಎಸ್ಪಿ ದರದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಟನ್ ಕಬ್ಬಿಗೆ ೫೫೦೦ರೂ. ನಿಗದಿ, ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗ ಬುಧವಾರ ಅನಿರ್ದಿಷ್ಟ ಪ್ರತಿಭಟನೆ ಆರಂಭಿಸಿದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಭಾಗ್ಯಜ್ಯೋತಿ, ಕುಠೀರಜ್ಯೋತಿ ಸೇರಿದಂತೆ ಕರ ನಿರಾಕರಣೆ ಸಂದರ್ಭದಲ್ಲಿ ಉಳಿಸಿಕೊಂಡಿರುವ ಗೃಹಬಳಕೆಯ ವಿದ್ಯುತ್ ಬಾಕಿಯ ನ್ನು ಸಂಪೂರ್ಣ ಮನ್ನಾ ಮಾಡಬೇಕು. ಹಾಗೆೆಯೇ ವಿದ್ಯುತ್ ತಿದ್ದುಪಡಿ ಕಾಯಿದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೂಲಕ ಕೇಂದ್ರ ಸರ್ಕಾರ ರೈತರಿಗೆ ಕೊಟ್ಟಿದ್ದ ಭರವಸೆಯನ್ನು ಹುಸಿಗೊಳಿಸಿದೆ. ಈ ಕಾಯಿದೆುಂನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಎಂಎಸ್ಪಿ ದರದಲ್ಲಿ ಕೃಷಿ ಉತ್ಪನ್ನಗಳನ್ನು ಕೊಳ್ಳಲು ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು. ರೈತರಿಗೆ ವಿವಿಧ ಯೋಜನೆಯಡಿ ನೀಡಲಾಗುತ್ತಿರುವ ಸಹಾಯಧನವನ್ನು ಸಾಲದ ಕಂತಿಗೆ ಜಮೆ ಮಾಡಿಕೊಳ್ಳುತ್ತಿರುವುದು ಅಕ್ಷಮ್ಯ. ಕೂಡಲೇ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಖಾಸಗಿ ಲೇವಾದೇವಿದಾರರು, ಗಿರವಿದಾರರು, ಮೈಕ್ರೋ ಫೈನಾನ್ಸ್ ಕಂಪನಿಗಳವರು ನಿಗಧಿಗಿಂತ ಅಧಿಕ ಬಡ್ಡಿುಂನ್ನು ರೈತರಿಂದ ವಸೂಲಿ ಮಾಡಿ ಶೋಷಣೆ ಮಾಡುತ್ತಿದ್ದರು ಅಧಿಕಾರಿಗಳು ಮೌನವಹಿಸಿರುವುದು ದುರದೃಷ್ಟಕರ. ಈ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಮಳೆಯ ನಡುವೆಯೂ ಪ್ರತಿಭಟನೆ ಮುಂದುವರಿಸಿದ್ದಾರೆ.
ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಹಕಾರ, ಆಹಾರ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸಮಸ್ಯೆ ಆಲಿಸಿದರು.
ರೈತಸಂಘದ ರಾಜ್ಯ ಉಪಾಧ್ಯಕ್ಷ ಎ.ಎಂ.ಮಹೇಶ್ ಪ್ರಭು, ಮಂಡ್ಯ ಪ್ರಸನ್ನಗೌಡ, ಜಿಲ್ಲಾಧ್ಯಕ್ಷ ಹೆಬ್ಬಸೂರು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಜ್ಯೋತಿಗೌಡನಪುರ ಸಿದ್ದರಾಜು, ತಾಲ್ಲೂಕು ಅಧ್ಯಕ್ಷ ದೇಮಹಳ್ಳಿ ಪ್ರಸಾದ್, ಮುಖಂಡರಾದ ಶೈಲೇಂದ್ರ, ಬಸವರಾಜಪ್ಪ, ಮೂಡ್ನಾಕೂಡು ಮಹೇಶ್, ಹೊನ್ನೇಗೌಡನಹುಂಡಿ ಸಿದ್ದರಾಜು, ಉಮ್ಮತ್ತೂರು ಲಿಂಗರಾಜು, ಎ.ಎಂ.ಜಯಣ್ಣ,ಕಾಡಳ್ಳಿಚಿನ್ನಸ್ವಾಮಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಬ್ಬು ಕಟಾವು ಭರವಸೆ
೧೬ ತಿಂಗಳಾದರೂ ತಮ್ಮ ಕಬ್ಬು ಕಟಾವಿಗೆ ಅನುಮತಿ ನೀಡಿಲ್ಲ. ಇದರಿಂದ ನಷ್ಟವಾಗುತ್ತಿದೆ ಎಂದು ರೈತ ಕೆರೆಹಳ್ಳಿ ಮಹೇಶ್ ಧರಣಿ ಸಂದರ್ಭದಲ್ಲಿ ದೂರಿದರು. ಕೂಡಲೇ ಕಾರ್ಖಾನೆಯಿಂದ ಕಟಾವಿಗೆ ಅನುಮತಿ ಕೊಡಿಸುವುದಾಗಿ ಆಹಾರ ಇಲಾಖೆ ಅಧಿಕಾರಿ ಭರವಸೆ ನೀಡಿದರು.
ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್ ಶೂಟ್ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ…
ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು…
ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…
ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…
ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…