ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಡೀ ಮೈಸೂರಿನ ತುಂಬಾ ಗುಂಬಜ್ನಂತಹ ವಿನ್ಯಾಸಗಳು ನಗರದ ಅಂದವನ್ನು ಹೆಚ್ಚಿಸಿದ್ದು, ಪ್ರವಾಸಿಗರಿಗೆ ಪಾರಂಪರಿಕ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತವೆ. ಆದರೆ, ಇಂತಹ ವಿನ್ಯಾಸದ ಮಹತ್ವ ತಿಳಿಯದೇ ಮೈಸೂರಿನಲ್ಲಿ ವಿಕೃತಿ ತೋರುತ್ತಿರುವ ಬಿಜೆಪಿಗರು ನಿಜಕ್ಕೂ ಸಾರ್ವಜನಿಕ ಬದುಕಿನ ಜವಾಬ್ದಾರಿ ಏನು ಎಂಬುದನ್ನು ತಿಳಿಯದೇ ವರ್ತಿಸುತ್ತಿದ್ದಾರೆ.
ಭಾರತವನ್ನು ಮೊಘಲರು, ಬ್ರಿಟಿಷರು ಆಳಿದ್ದಾರೆ. ಮೌರ್ಯರು, ಡಚ್ಚರು, ಫ್ರೆಂಚರು ಮತ್ತು ಪೋರ್ಚುಗೀಸರೂ ಆಳಿದ್ದರೂ ಭಾರತ ಯಾವುದೋ ಒಂದು ಧರ್ಮದ ದೇಶವಾಗಿ ಪರಿವರ್ತನೆಯಾಗಿಲ್ಲ. ಭಾರತ ತನ್ನ ವೈವಿಧ್ಯ ತೆಗಳಿಂದ ಭಾರತವಾಗಿಯೇ ಉಳಿದಿದೆ. ಹೀಗಿದ್ದರೂ ಅಭಿವೃದ್ಧಿ ವಿಷಯಗಳನ್ನು ಮರೆ ಮಾಚಲು ಮತ್ತು ಚುನಾವಣಾ ಕಾಲದಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಸಲುವಾಗಿ ಕೋಮು ರಾಜಕೀಯ ಮಾಡುತ್ತಿರುವ ಮೈಸೂರಿನ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಬೇಜವಾಬ್ದಾರಿ ನಡವಳಿಕೆಯನ್ನು ನಿಲ್ಲಿಸಿ, ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…