ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಡೀ ಮೈಸೂರಿನ ತುಂಬಾ ಗುಂಬಜ್ನಂತಹ ವಿನ್ಯಾಸಗಳು ನಗರದ ಅಂದವನ್ನು ಹೆಚ್ಚಿಸಿದ್ದು, ಪ್ರವಾಸಿಗರಿಗೆ ಪಾರಂಪರಿಕ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತವೆ. ಆದರೆ, ಇಂತಹ ವಿನ್ಯಾಸದ ಮಹತ್ವ ತಿಳಿಯದೇ ಮೈಸೂರಿನಲ್ಲಿ ವಿಕೃತಿ ತೋರುತ್ತಿರುವ ಬಿಜೆಪಿಗರು ನಿಜಕ್ಕೂ ಸಾರ್ವಜನಿಕ ಬದುಕಿನ ಜವಾಬ್ದಾರಿ ಏನು ಎಂಬುದನ್ನು ತಿಳಿಯದೇ ವರ್ತಿಸುತ್ತಿದ್ದಾರೆ.
ಭಾರತವನ್ನು ಮೊಘಲರು, ಬ್ರಿಟಿಷರು ಆಳಿದ್ದಾರೆ. ಮೌರ್ಯರು, ಡಚ್ಚರು, ಫ್ರೆಂಚರು ಮತ್ತು ಪೋರ್ಚುಗೀಸರೂ ಆಳಿದ್ದರೂ ಭಾರತ ಯಾವುದೋ ಒಂದು ಧರ್ಮದ ದೇಶವಾಗಿ ಪರಿವರ್ತನೆಯಾಗಿಲ್ಲ. ಭಾರತ ತನ್ನ ವೈವಿಧ್ಯ ತೆಗಳಿಂದ ಭಾರತವಾಗಿಯೇ ಉಳಿದಿದೆ. ಹೀಗಿದ್ದರೂ ಅಭಿವೃದ್ಧಿ ವಿಷಯಗಳನ್ನು ಮರೆ ಮಾಚಲು ಮತ್ತು ಚುನಾವಣಾ ಕಾಲದಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಸಲುವಾಗಿ ಕೋಮು ರಾಜಕೀಯ ಮಾಡುತ್ತಿರುವ ಮೈಸೂರಿನ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಬೇಜವಾಬ್ದಾರಿ ನಡವಳಿಕೆಯನ್ನು ನಿಲ್ಲಿಸಿ, ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…