ಜಿಲ್ಲೆಗಳು

ತೆರಿಗೆದಾರರ ಹಣ ಪೋಲು ಮಾಡುತ್ತಿರುವುದು ಬೇಜವಾಬ್ದಾರಿ: ಎಚ್‌ಸಿಎಂ

ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಇಡೀ ಮೈಸೂರಿನ ತುಂಬಾ ಗುಂಬಜ್‌ನಂತಹ ವಿನ್ಯಾಸಗಳು ನಗರದ ಅಂದವನ್ನು ಹೆಚ್ಚಿಸಿದ್ದು, ಪ್ರವಾಸಿಗರಿಗೆ ಪಾರಂಪರಿಕ ಎನ್ನುವ ಭಾವನೆಯನ್ನು ಹುಟ್ಟು ಹಾಕುತ್ತವೆ. ಆದರೆ, ಇಂತಹ ವಿನ್ಯಾಸದ ಮಹತ್ವ ತಿಳಿಯದೇ ಮೈಸೂರಿನಲ್ಲಿ ವಿಕೃತಿ ತೋರುತ್ತಿರುವ ಬಿಜೆಪಿಗರು ನಿಜಕ್ಕೂ ಸಾರ್ವಜನಿಕ ಬದುಕಿನ ಜವಾಬ್ದಾರಿ ಏನು ಎಂಬುದನ್ನು ತಿಳಿಯದೇ ವರ್ತಿಸುತ್ತಿದ್ದಾರೆ.
ಭಾರತವನ್ನು ಮೊಘಲರು, ಬ್ರಿಟಿಷರು ಆಳಿದ್ದಾರೆ. ಮೌರ್ಯರು, ಡಚ್ಚರು, ಫ್ರೆಂಚರು ಮತ್ತು ಪೋರ್ಚುಗೀಸರೂ ಆಳಿದ್ದರೂ ಭಾರತ ಯಾವುದೋ ಒಂದು ಧರ್ಮದ ದೇಶವಾಗಿ ಪರಿವರ್ತನೆಯಾಗಿಲ್ಲ. ಭಾರತ ತನ್ನ ವೈವಿಧ್ಯ ತೆಗಳಿಂದ ಭಾರತವಾಗಿಯೇ ಉಳಿದಿದೆ. ಹೀಗಿದ್ದರೂ ಅಭಿವೃದ್ಧಿ ವಿಷಯಗಳನ್ನು ಮರೆ ಮಾಚಲು ಮತ್ತು ಚುನಾವಣಾ ಕಾಲದಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಸಲುವಾಗಿ ಕೋಮು ರಾಜಕೀಯ ಮಾಡುತ್ತಿರುವ ಮೈಸೂರಿನ ಸಂಸದರು ಮತ್ತು ಶಾಸಕರು ಈ ಕೂಡಲೇ ತಮ್ಮ ಬೇಜವಾಬ್ದಾರಿ ನಡವಳಿಕೆಯನ್ನು ನಿಲ್ಲಿಸಿ, ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು ಎಂದು ಈ ಮೂಲಕ ಆಗ್ರಹಿಸುತ್ತೇನೆ.

andolanait

Recent Posts

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

1 hour ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

2 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

4 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

7 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

8 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

9 hours ago