ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ತಿಳಿಸಿದರು./
ದೇಶದಲ್ಲಿ 2030ರೊಳಗೆ ಎಚ್ ಐವಿ ಏಡ್ಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಲವಾರು ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ, ಸಮುದಾಯ ಆಧಾರಿತ ತಪಾಸಣೆಯಿಂದ ಅಪಾಯದಲ್ಲಿರುವ ಜನಸಂಖ್ಯೆಯಲ್ಲಿ ಎಚ್ ಐವಿ ತಡೆಗಟ್ಟಿವಿಕೆ ಆರೈಕೆ ಮತ್ತು ಸೇವೆಗಳ ಪಡೆಯುವಿಕೆಯನ್ನು ಸುಧಾರಿಸಲು ಸಮುದಾಯ ಆಧಾರಿತ ಉಚಿತ ಎಚ್ ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತಿದೆ ,ಸಮುದಾಯ ಆಧಾರಿತ ತಪಾಸಣೆಯನ್ನು ಜನನಿಬಿಡ ಗುಡ್ಡಗಾಡು ಜಾತ್ರೆ ಸಂತೆ ನಡೆಯುವ ಸ್ಥಳಗಳಲ್ಲಿ ಸೇರುವ ಜನರಿಗೆ ಆರೋಗ್ಯ ಅರಿವು ಮುಡಿಸುವುದರ ಮೂಲಕ ಆರೋಗ್ಯ ತಪಾಸಣಾ ಶಿಬಿರ ನಡೆಸುವುದು ಸಾಮಾನ್ಯ ಇಂತಹ ಶಿಬಿರಗಳನ್ನು ಆರೋಗ್ಯ ಶಿಕ್ಷಣ ಮತ್ತು ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದ ಸಂಯೋಜನೆಯೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸುವುದರ ಮೂಲಕ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.
ಹೆಚ್ ಐವಿ ಪರೀಕ್ಷೆ ಮಾಡಿಸಿ : ಹೆಚ್ ಐವಿ ಪರೀಕ್ಷೆಗೊಳಗಾದ ವರು ಹೆಚ್ ಐವಿ ಸೋಂಕು ಇಲ್ಲ ಎಂದು ತಿಳಿದುಕೊಂಡ ಜನರು ಲೈಂಗಿಕತೆ, ಮಾದಕವಸ್ತು ಬಳಕೆ ಮತ್ತು ಆರೋಗ್ಯ ರಕ್ಷಣೆ ಬಗ್ಗೆ ಮುಂಜಾಗ್ರತೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಇದರಿಂದ ಹೆಚ್ ಐವಿ ತಡೆಯಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪರಾಣಿ,ಆಸ್ಪತ್ರೆ ಸಿಬ್ಬಂದಿ ವರ್ಗ ಹಾಗೂ ಸಮುದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಹಾಜರಿದ್ದರು
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…