ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ತಿಳಿಸಿದರು./
ದೇಶದಲ್ಲಿ 2030ರೊಳಗೆ ಎಚ್ ಐವಿ ಏಡ್ಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಲವಾರು ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ, ಸಮುದಾಯ ಆಧಾರಿತ ತಪಾಸಣೆಯಿಂದ ಅಪಾಯದಲ್ಲಿರುವ ಜನಸಂಖ್ಯೆಯಲ್ಲಿ ಎಚ್ ಐವಿ ತಡೆಗಟ್ಟಿವಿಕೆ ಆರೈಕೆ ಮತ್ತು ಸೇವೆಗಳ ಪಡೆಯುವಿಕೆಯನ್ನು ಸುಧಾರಿಸಲು ಸಮುದಾಯ ಆಧಾರಿತ ಉಚಿತ ಎಚ್ ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತಿದೆ ,ಸಮುದಾಯ ಆಧಾರಿತ ತಪಾಸಣೆಯನ್ನು ಜನನಿಬಿಡ ಗುಡ್ಡಗಾಡು ಜಾತ್ರೆ ಸಂತೆ ನಡೆಯುವ ಸ್ಥಳಗಳಲ್ಲಿ ಸೇರುವ ಜನರಿಗೆ ಆರೋಗ್ಯ ಅರಿವು ಮುಡಿಸುವುದರ ಮೂಲಕ ಆರೋಗ್ಯ ತಪಾಸಣಾ ಶಿಬಿರ ನಡೆಸುವುದು ಸಾಮಾನ್ಯ ಇಂತಹ ಶಿಬಿರಗಳನ್ನು ಆರೋಗ್ಯ ಶಿಕ್ಷಣ ಮತ್ತು ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದ ಸಂಯೋಜನೆಯೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸುವುದರ ಮೂಲಕ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.
ಹೆಚ್ ಐವಿ ಪರೀಕ್ಷೆ ಮಾಡಿಸಿ : ಹೆಚ್ ಐವಿ ಪರೀಕ್ಷೆಗೊಳಗಾದ ವರು ಹೆಚ್ ಐವಿ ಸೋಂಕು ಇಲ್ಲ ಎಂದು ತಿಳಿದುಕೊಂಡ ಜನರು ಲೈಂಗಿಕತೆ, ಮಾದಕವಸ್ತು ಬಳಕೆ ಮತ್ತು ಆರೋಗ್ಯ ರಕ್ಷಣೆ ಬಗ್ಗೆ ಮುಂಜಾಗ್ರತೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಇದರಿಂದ ಹೆಚ್ ಐವಿ ತಡೆಯಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪರಾಣಿ,ಆಸ್ಪತ್ರೆ ಸಿಬ್ಬಂದಿ ವರ್ಗ ಹಾಗೂ ಸಮುದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಹಾಜರಿದ್ದರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…