ಜಿಲ್ಲೆಗಳು

ಮಧುಮೇಹ, ಹೆಚ್ಐವಿ, ಟಿಬಿ ಕಾಯಿಲೆಗಳಿಗೆ ಚಿಕಿತ್ಸೆ ಉಚಿತ : ಡಾ. ಪ್ರಕಾಶ್

ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರಕಾಶ್ ತಿಳಿಸಿದರು./
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಸಮುದಾಯ ಆಧಾರಿತ ಸ್ವಯಂ ಸೇವಾ ಸಂಘ ಸೇವಾ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಸಮೂದಾಯ ಆಧಾರಿತ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ 2030ರೊಳಗೆ ಎಚ್ ಐವಿ ಏಡ್ಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಲವಾರು ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ, ಸಮುದಾಯ ಆಧಾರಿತ ತಪಾಸಣೆಯಿಂದ ಅಪಾಯದಲ್ಲಿರುವ ಜನಸಂಖ್ಯೆಯಲ್ಲಿ ಎಚ್ ಐವಿ ತಡೆಗಟ್ಟಿವಿಕೆ ಆರೈಕೆ ಮತ್ತು ಸೇವೆಗಳ ಪಡೆಯುವಿಕೆಯನ್ನು ಸುಧಾರಿಸಲು ಸಮುದಾಯ ಆಧಾರಿತ ಉಚಿತ ಎಚ್ ಐವಿ ಆಪ್ತಸಮಾಲೋಚನೆ ಮತ್ತು ಪರೀಕ್ಷೆಯನ್ನು ಮಾಡಲಾಗುತ್ತಿದೆ ,ಸಮುದಾಯ ಆಧಾರಿತ ತಪಾಸಣೆಯನ್ನು ಜನನಿಬಿಡ ಗುಡ್ಡಗಾಡು ಜಾತ್ರೆ ಸಂತೆ ನಡೆಯುವ ಸ್ಥಳಗಳಲ್ಲಿ ಸೇರುವ ಜನರಿಗೆ ಆರೋಗ್ಯ ಅರಿವು ಮುಡಿಸುವುದರ ಮೂಲಕ ಆರೋಗ್ಯ ತಪಾಸಣಾ ಶಿಬಿರ ನಡೆಸುವುದು ಸಾಮಾನ್ಯ ಇಂತಹ ಶಿಬಿರಗಳನ್ನು ಆರೋಗ್ಯ ಶಿಕ್ಷಣ ಮತ್ತು ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದ ಸಂಯೋಜನೆಯೊಂದಿಗೆ ಆರೋಗ್ಯ ಶಿಬಿರ ಏರ್ಪಡಿಸುವುದರ ಮೂಲಕ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಹೆಚ್ ಐವಿ ಪರೀಕ್ಷೆ ಮಾಡಿಸಿ : ಹೆಚ್ ಐವಿ ಪರೀಕ್ಷೆಗೊಳಗಾದ ವರು ಹೆಚ್ ಐವಿ ಸೋಂಕು ಇಲ್ಲ ಎಂದು ತಿಳಿದುಕೊಂಡ ಜನರು ಲೈಂಗಿಕತೆ, ಮಾದಕವಸ್ತು ಬಳಕೆ ಮತ್ತು ಆರೋಗ್ಯ ರಕ್ಷಣೆ ಬಗ್ಗೆ ಮುಂಜಾಗ್ರತೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಇದರಿಂದ ಹೆಚ್ ಐವಿ ತಡೆಯಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪುಷ್ಪರಾಣಿ,ಆಸ್ಪತ್ರೆ ಸಿಬ್ಬಂದಿ ವರ್ಗ ಹಾಗೂ ಸಮುದಾಯ ಆಧಾರಿತ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಹಾಜರಿದ್ದರು

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago