ಶಿಕ್ಷಕಿಯೊಬ್ಬರಿಗೆ ಅದೇ ಯುವಕನೋರ್ವ ಪ್ರೀತಿಸಿ, ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಜಾತಿ ಕಾರಣವೊಡ್ಡಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂಲತಃ ನಂಜನಗೂಡಿನ ನಿವಾಸಿಯಾಗಿರುವ ರಮ್ಯಾಶ್ರೀ ಮಳವಳ್ಳಿಯ ತನ್ನ ಅಜ್ಜಿ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮುಗಿಸಿ ಸದ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಅದೇ ಊರಿನ ಮಂಜು ಎಂಬಾತ ಎಂಟು ವರ್ಷದಿಂದ ತನ್ನನ್ನು ಪ್ರೀತಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಮಂಜು ಮನೆ ಮುಂದೆ ಮಧ್ಯರಾತ್ರಿ ಯುವತಿ ಧರಣಿ ಕುಳಿತಿದ್ದಾರೆ. ಬಳಿಕ ಬೆಳಗ್ಗೆ ಮಂಜು ಮನೆಯವರು ರಮ್ಯಾಶ್ರೀ ಮೇಲೆ ಹಲ್ಲೆ ನಡೆಸಿದ್ದು, ಎರಡೂ ಮನೆಗಳ ನಡುವೆ ವಾಗ್ವಾದ ನಡೆದಿದೆ. ಈ ಗಲಾಟೆಯಲ್ಲಿ ಗಾಯಗೊಂಡಿರುವ ಮಂಜುಶ್ರೀ ಸದ್ಯ ಮಂಡ್ಯ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪೊಲೀಸ್ ದೂರನ್ನೂ ಸಹ ದಾಖಲಿಸಲು ರಮ್ಯಾಶ್ರೀ ಮುಂದಾಗಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…