ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು.
ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು.
ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು ಪೂಜೆ ಪುರಸ್ಕಾರ ನೆರವೇರಿಸಿದ ನಂತರ ಗುಡುಗನಹಳ್ಳಿ ಬಸವೇಶ್ವರ ದೇವಾಲಯದ ಬಳಿಗೆ ಟ್ರಾಕ್ಟರ್ನಲ್ಲಿ ಮೆರವಣಿಗೆ ಮೂಲಕ ಕರೆತಂದು ಅಂತ್ಯಕ್ರಿಯೆ ನಡೆಸಿದರು.
ಮಾಯಿಗೌಡನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸದಸ್ಯ ಗಂಗಾಧರ್, ಗ್ರಾಮದ ಮುಖಂಡರಾದ ಸ್ವಾಮೀಗೌಡ, ತಮ್ಮೇಗೌಡ, ಲೋಕೇಶ್, ಯೋಗೇಶ್, ಹಿರಣಯ್ಯ, ಪ್ರಭಾಕರ್, ಕೆಂಪರಾಜು ಇತರರು ಹಾಜರಿದ್ದರು.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…