ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು.
ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು.
ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು ಪೂಜೆ ಪುರಸ್ಕಾರ ನೆರವೇರಿಸಿದ ನಂತರ ಗುಡುಗನಹಳ್ಳಿ ಬಸವೇಶ್ವರ ದೇವಾಲಯದ ಬಳಿಗೆ ಟ್ರಾಕ್ಟರ್ನಲ್ಲಿ ಮೆರವಣಿಗೆ ಮೂಲಕ ಕರೆತಂದು ಅಂತ್ಯಕ್ರಿಯೆ ನಡೆಸಿದರು.
ಮಾಯಿಗೌಡನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸದಸ್ಯ ಗಂಗಾಧರ್, ಗ್ರಾಮದ ಮುಖಂಡರಾದ ಸ್ವಾಮೀಗೌಡ, ತಮ್ಮೇಗೌಡ, ಲೋಕೇಶ್, ಯೋಗೇಶ್, ಹಿರಣಯ್ಯ, ಪ್ರಭಾಕರ್, ಕೆಂಪರಾಜು ಇತರರು ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…