ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ ನೀಡಿದರು.
ಬಳಿಕ ಮಾತನಾಡಿದ ಅವರು, ಪೊಲೀಸ್ ಸಮೂಹ ವಾದ್ಯಮೇಳದ ಕಾರ್ಯಕ್ರಮವನ್ನು ಮೆಚ್ಚಿ ೩ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ಟೆಂಟ್ ಪೆಗ್ಗಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹಿಸುವ ದೃಷ್ಟಿಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮದಲ್ಲಿ ಇನ್ನು ಅತ್ಯುತ್ತಮ ಪ್ರದರ್ಶನ ನೀಡಬೇಕು. ಹಳಬರು ಹೊಸದಾಗಿ ಬಂದಿರುವವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷದ ಹೊತ್ತಿಗೆ ಅವರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.
ತಂಡದ ೩ ಮಂದಿ ಎಆರ್ಎಸ್ಐ, ೫ ಮಂದಿ ಎಎಚ್ಸಿ ಮತ್ತು ಒಬ್ಬರು ಎಸಿಪಿಗೆ ಬಹುಮಾನ ನೀಡಲಾಯಿತು. ತಂಡದ ಎಆರ್ಎಸ್ಐಗಳಾದ ಎಂ.ಎಸ್.ಆನಂದ ಸಿಂಗ್, ಮಲ್ಲಿಕಾರ್ಜುನ ಸ್ವಾಮಿ, ರಮೇಶ್ ರಾವ್, ಎಎಚ್ಸಿಗಳಾದ ಎಚ್.ಕೆ.ಸೋಮಣ್ಣ, ಮಹೇಶ್, ಚಂದ್ರ, ಎಂ.ಆರ್.ಸಂದೇಶ, ರುದ್ರಪ್ಪ, ಎಸಿಪಿ ಸುರೇಶ್ ಮಳಲಿ, ಕೃಷ್ಣ (ಸಹಾಯಕ ಕರ್ತವ್ಯ) ಅವರಿಗೆ ಬಹುಮಾನ ನೀಡಲಾಯಿತು.
ಅಶ್ವಾರೋಹಿ ದಳದ ಕಮಾಂಡೆಂಟ್ ಎಂ.ಜಿ.ನಾಗರಾಜು, ಡಿವೈಎಸ್ಪಿ ಸುರೇಶ್, ಪಿಐಗಳಾದ ರಾಜು ಮತ್ತು ಬಸಪ್ಪ ಸಾತನೂರು ಮತ್ತಿತರರು ಹಾಜರಿದ್ದರು.
ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…
ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…
ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…
ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…