ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ ನೀಡಿದರು.
ಬಳಿಕ ಮಾತನಾಡಿದ ಅವರು, ಪೊಲೀಸ್ ಸಮೂಹ ವಾದ್ಯಮೇಳದ ಕಾರ್ಯಕ್ರಮವನ್ನು ಮೆಚ್ಚಿ ೩ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ಟೆಂಟ್ ಪೆಗ್ಗಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹಿಸುವ ದೃಷ್ಟಿಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮದಲ್ಲಿ ಇನ್ನು ಅತ್ಯುತ್ತಮ ಪ್ರದರ್ಶನ ನೀಡಬೇಕು. ಹಳಬರು ಹೊಸದಾಗಿ ಬಂದಿರುವವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷದ ಹೊತ್ತಿಗೆ ಅವರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.
ತಂಡದ ೩ ಮಂದಿ ಎಆರ್ಎಸ್ಐ, ೫ ಮಂದಿ ಎಎಚ್ಸಿ ಮತ್ತು ಒಬ್ಬರು ಎಸಿಪಿಗೆ ಬಹುಮಾನ ನೀಡಲಾಯಿತು. ತಂಡದ ಎಆರ್ಎಸ್ಐಗಳಾದ ಎಂ.ಎಸ್.ಆನಂದ ಸಿಂಗ್, ಮಲ್ಲಿಕಾರ್ಜುನ ಸ್ವಾಮಿ, ರಮೇಶ್ ರಾವ್, ಎಎಚ್ಸಿಗಳಾದ ಎಚ್.ಕೆ.ಸೋಮಣ್ಣ, ಮಹೇಶ್, ಚಂದ್ರ, ಎಂ.ಆರ್.ಸಂದೇಶ, ರುದ್ರಪ್ಪ, ಎಸಿಪಿ ಸುರೇಶ್ ಮಳಲಿ, ಕೃಷ್ಣ (ಸಹಾಯಕ ಕರ್ತವ್ಯ) ಅವರಿಗೆ ಬಹುಮಾನ ನೀಡಲಾಯಿತು.
ಅಶ್ವಾರೋಹಿ ದಳದ ಕಮಾಂಡೆಂಟ್ ಎಂ.ಜಿ.ನಾಗರಾಜು, ಡಿವೈಎಸ್ಪಿ ಸುರೇಶ್, ಪಿಐಗಳಾದ ರಾಜು ಮತ್ತು ಬಸಪ್ಪ ಸಾತನೂರು ಮತ್ತಿತರರು ಹಾಜರಿದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…