ಜಿಲ್ಲೆಗಳು

ಟೆಂಟ್ ಪೆಗ್ಗಿಂಗ್ ಪ್ರದರ್ಶಿಸಿದ ತಂಡಕ್ಕೆ 1 ಲಕ್ಷ ರೂ. ಬಹುಮಾನ

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ ನೀಡಿದರು.

ಬಳಿಕ ಮಾತನಾಡಿದ ಅವರು, ಪೊಲೀಸ್ ಸಮೂಹ ವಾದ್ಯಮೇಳದ ಕಾರ್ಯಕ್ರಮವನ್ನು ಮೆಚ್ಚಿ ೩ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ಟೆಂಟ್ ಪೆಗ್ಗಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹಿಸುವ ದೃಷ್ಟಿಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮದಲ್ಲಿ ಇನ್ನು ಅತ್ಯುತ್ತಮ ಪ್ರದರ್ಶನ ನೀಡಬೇಕು. ಹಳಬರು ಹೊಸದಾಗಿ ಬಂದಿರುವವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷದ ಹೊತ್ತಿಗೆ ಅವರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.
ತಂಡದ ೩ ಮಂದಿ ಎಆರ್ಎಸ್ಐ, ೫ ಮಂದಿ ಎಎಚ್ಸಿ ಮತ್ತು ಒಬ್ಬರು ಎಸಿಪಿಗೆ ಬಹುಮಾನ ನೀಡಲಾಯಿತು. ತಂಡದ ಎಆರ್ಎಸ್ಐಗಳಾದ ಎಂ.ಎಸ್.ಆನಂದ ಸಿಂಗ್, ಮಲ್ಲಿಕಾರ್ಜುನ ಸ್ವಾಮಿ, ರಮೇಶ್ ರಾವ್, ಎಎಚ್ಸಿಗಳಾದ ಎಚ್.ಕೆ.ಸೋಮಣ್ಣ, ಮಹೇಶ್, ಚಂದ್ರ, ಎಂ.ಆರ್.ಸಂದೇಶ, ರುದ್ರಪ್ಪ, ಎಸಿಪಿ ಸುರೇಶ್ ಮಳಲಿ, ಕೃಷ್ಣ (ಸಹಾಯಕ ಕರ್ತವ್ಯ) ಅವರಿಗೆ ಬಹುಮಾನ ನೀಡಲಾಯಿತು.
ಅಶ್ವಾರೋಹಿ ದಳದ ಕಮಾಂಡೆಂಟ್ ಎಂ.ಜಿ.ನಾಗರಾಜು, ಡಿವೈಎಸ್ಪಿ ಸುರೇಶ್, ಪಿಐಗಳಾದ ರಾಜು ಮತ್ತು ಬಸಪ್ಪ ಸಾತನೂರು ಮತ್ತಿತರರು ಹಾಜರಿದ್ದರು.

andolanait

Recent Posts

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

44 mins ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

47 mins ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

55 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

1 hour ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

1 hour ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

2 hours ago