ಜಿಲ್ಲೆಗಳು

ಟೆಂಟ್ ಪೆಗ್ಗಿಂಗ್ ಪ್ರದರ್ಶಿಸಿದ ತಂಡಕ್ಕೆ 1 ಲಕ್ಷ ರೂ. ಬಹುಮಾನ

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ ನೀಡಿದರು.

ಬಳಿಕ ಮಾತನಾಡಿದ ಅವರು, ಪೊಲೀಸ್ ಸಮೂಹ ವಾದ್ಯಮೇಳದ ಕಾರ್ಯಕ್ರಮವನ್ನು ಮೆಚ್ಚಿ ೩ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ಟೆಂಟ್ ಪೆಗ್ಗಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹಿಸುವ ದೃಷ್ಟಿಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮದಲ್ಲಿ ಇನ್ನು ಅತ್ಯುತ್ತಮ ಪ್ರದರ್ಶನ ನೀಡಬೇಕು. ಹಳಬರು ಹೊಸದಾಗಿ ಬಂದಿರುವವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷದ ಹೊತ್ತಿಗೆ ಅವರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.
ತಂಡದ ೩ ಮಂದಿ ಎಆರ್ಎಸ್ಐ, ೫ ಮಂದಿ ಎಎಚ್ಸಿ ಮತ್ತು ಒಬ್ಬರು ಎಸಿಪಿಗೆ ಬಹುಮಾನ ನೀಡಲಾಯಿತು. ತಂಡದ ಎಆರ್ಎಸ್ಐಗಳಾದ ಎಂ.ಎಸ್.ಆನಂದ ಸಿಂಗ್, ಮಲ್ಲಿಕಾರ್ಜುನ ಸ್ವಾಮಿ, ರಮೇಶ್ ರಾವ್, ಎಎಚ್ಸಿಗಳಾದ ಎಚ್.ಕೆ.ಸೋಮಣ್ಣ, ಮಹೇಶ್, ಚಂದ್ರ, ಎಂ.ಆರ್.ಸಂದೇಶ, ರುದ್ರಪ್ಪ, ಎಸಿಪಿ ಸುರೇಶ್ ಮಳಲಿ, ಕೃಷ್ಣ (ಸಹಾಯಕ ಕರ್ತವ್ಯ) ಅವರಿಗೆ ಬಹುಮಾನ ನೀಡಲಾಯಿತು.
ಅಶ್ವಾರೋಹಿ ದಳದ ಕಮಾಂಡೆಂಟ್ ಎಂ.ಜಿ.ನಾಗರಾಜು, ಡಿವೈಎಸ್ಪಿ ಸುರೇಶ್, ಪಿಐಗಳಾದ ರಾಜು ಮತ್ತು ಬಸಪ್ಪ ಸಾತನೂರು ಮತ್ತಿತರರು ಹಾಜರಿದ್ದರು.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago