ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ ನೀಡಿದರು.
ಬಳಿಕ ಮಾತನಾಡಿದ ಅವರು, ಪೊಲೀಸ್ ಸಮೂಹ ವಾದ್ಯಮೇಳದ ಕಾರ್ಯಕ್ರಮವನ್ನು ಮೆಚ್ಚಿ ೩ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ಟೆಂಟ್ ಪೆಗ್ಗಿಂಗ್ ತಂಡವೂ ಅತ್ಯುತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹಿಸುವ ದೃಷ್ಟಿಯಿಂದ 1 ಲಕ್ಷ ರೂ. ಬಹುಮಾನ ನೀಡಲಾಗಿದೆ. ಮುಂದಿನ ವರ್ಷದ ಕಾರ್ಯಕ್ರಮದಲ್ಲಿ ಇನ್ನು ಅತ್ಯುತ್ತಮ ಪ್ರದರ್ಶನ ನೀಡಬೇಕು. ಹಳಬರು ಹೊಸದಾಗಿ ಬಂದಿರುವವರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಮುಂದಿನ ವರ್ಷದ ಹೊತ್ತಿಗೆ ಅವರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.
ತಂಡದ ೩ ಮಂದಿ ಎಆರ್ಎಸ್ಐ, ೫ ಮಂದಿ ಎಎಚ್ಸಿ ಮತ್ತು ಒಬ್ಬರು ಎಸಿಪಿಗೆ ಬಹುಮಾನ ನೀಡಲಾಯಿತು. ತಂಡದ ಎಆರ್ಎಸ್ಐಗಳಾದ ಎಂ.ಎಸ್.ಆನಂದ ಸಿಂಗ್, ಮಲ್ಲಿಕಾರ್ಜುನ ಸ್ವಾಮಿ, ರಮೇಶ್ ರಾವ್, ಎಎಚ್ಸಿಗಳಾದ ಎಚ್.ಕೆ.ಸೋಮಣ್ಣ, ಮಹೇಶ್, ಚಂದ್ರ, ಎಂ.ಆರ್.ಸಂದೇಶ, ರುದ್ರಪ್ಪ, ಎಸಿಪಿ ಸುರೇಶ್ ಮಳಲಿ, ಕೃಷ್ಣ (ಸಹಾಯಕ ಕರ್ತವ್ಯ) ಅವರಿಗೆ ಬಹುಮಾನ ನೀಡಲಾಯಿತು.
ಅಶ್ವಾರೋಹಿ ದಳದ ಕಮಾಂಡೆಂಟ್ ಎಂ.ಜಿ.ನಾಗರಾಜು, ಡಿವೈಎಸ್ಪಿ ಸುರೇಶ್, ಪಿಐಗಳಾದ ರಾಜು ಮತ್ತು ಬಸಪ್ಪ ಸಾತನೂರು ಮತ್ತಿತರರು ಹಾಜರಿದ್ದರು.
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…