ಜಿಲ್ಲೆಗಳು

ತಾರಕ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಮರಿ ಸಾವು

ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಾಗರಹೊಳೆಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯದ ತಾರಕ ಗಸ್ತಿನ ಬಳಿಕ ಮೂರು ಮರಿಗಳನ್ನು ಹೊಂದಿದ್ದ ತಾಯಿ ಹುಲಿಯೊಂದು ಉರುಳುಗೆ ಸಿಲುಕಿ ಸಾವನ್ನಪ್ಪಿತ್ತು.

ಈ ವೇಳೆ ಅನಾಥವಾಗಿದ್ದ ಮೂರು ಮರಿಗಳನ್ನು ರಕ್ಷಣೆಗೆ ಅರಣ್ಯ ಇಲಾಖೆ ಕೊಂಬಿಂಗ್ ಕಾರಯಾಚರಣೆಯನ್ನು ಆರಂಭಿಸಿತ್ತು. ಈ ಸಂದರ್ಭದಲ್ಲಿ ಹುಲಿ ಮರಿಗಳು ಸ್ವತಃ ತಾವೇ ಜಿಂಕೆಯೊಂದನ್ನು ಬೇಟೆಯಾಡಿ ತಿನ್ನುತ್ತಿದ್ದ ದೃಶ್ಯ ಟ್ರಾಪ್ ಕ್ಯಾಮೆರಾಗೆ ಸೆರೆಯಾಗಿದ್ದರಿಂದ ಮರಿಗಳನ್ನು ಕಾಡಿನಲ್ಲೆ ಬಿಡುವ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿತ್ತು. ಅರಣ್ಯ ಇಲಾಖೆಯೂ ಕೊಂಬಿಂಗ್ ಮೂಲಕ ಅವುಗಳ ಚಲನವಲನದ ಮೇಲೆ ನಿಗಾ ವಹಿಸಿತ್ತು.

ಆದರೆ ಇದೀಗ ಕೂಂಬಿಂಗ್ ವೇಳೆ ಹುಲಿಮರಿಯೊಂದರ ಶವ ಪತ್ತೆಯಾಗಿದ್ದು, ಮತ್ತೊಂದು ಹುಲಿಯೊಡನೆ ಕಾದಾಡಿದ ಮರಿ ಹುಲಿಯು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ನಿಗಾವಹಿಸಲು ಕೂಂಬಿಂಗ್ ಮುಂದುವರಿಸುವುದಾಗಿ ಇಲಾಖೆ ಮಾಹಿತಿ ನೀಡಿದೆ.
ಮರಣೋತ್ತರ ಪರೀಕ್ಷೆಯ ನಂತರ ಹುಲಿಯ ಕಳೇಬರವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು. ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಪಶುವೈದ್ಯರಾದ ಡಾ.ಎಚ್.ರಮೇಶ್, ಡಾ.ಬಿ.ಬಿ.ಪ್ರಸನ್ನ, ಗೌರವ ವನ್ಯಜೀವಿ ಪರಿಪಾಲಕರು ಮತ್ತು ಎನ್‌ಟಿಸಿಎ ಪ್ರತಿನಿದಿಗಳಾದಕ್ಷಿ ಕೃತಿಕ ಆಲನಹಳ್ಳಿ, ಜೀವನ್ ಕೃಷ್ಣಪ್ಪ. ಅಂತರಸಂತೆ ಗ್ರಾಪಂ ಅಧ್ಯಕ್ಷ ಎಂ.ಸುಬ್ರಮಣ್ಯ, ವಲಯ ಅರಣ್ಯಾಧಿಕಾರಿ ಎಸ್.ಎಸ್.ಸಿದ್ಧರಾಜು ಮುಂತಾದವರು ಹಾಜರಿದ್ದರು.

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

1 hour ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

3 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

4 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

4 hours ago