ಜಿಲ್ಲೆಗಳು

ತಾರಕ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಮರಿ ಸಾವು

ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಾಗರಹೊಳೆಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯದ ತಾರಕ ಗಸ್ತಿನ ಬಳಿಕ ಮೂರು ಮರಿಗಳನ್ನು ಹೊಂದಿದ್ದ ತಾಯಿ ಹುಲಿಯೊಂದು ಉರುಳುಗೆ ಸಿಲುಕಿ ಸಾವನ್ನಪ್ಪಿತ್ತು.

ಈ ವೇಳೆ ಅನಾಥವಾಗಿದ್ದ ಮೂರು ಮರಿಗಳನ್ನು ರಕ್ಷಣೆಗೆ ಅರಣ್ಯ ಇಲಾಖೆ ಕೊಂಬಿಂಗ್ ಕಾರಯಾಚರಣೆಯನ್ನು ಆರಂಭಿಸಿತ್ತು. ಈ ಸಂದರ್ಭದಲ್ಲಿ ಹುಲಿ ಮರಿಗಳು ಸ್ವತಃ ತಾವೇ ಜಿಂಕೆಯೊಂದನ್ನು ಬೇಟೆಯಾಡಿ ತಿನ್ನುತ್ತಿದ್ದ ದೃಶ್ಯ ಟ್ರಾಪ್ ಕ್ಯಾಮೆರಾಗೆ ಸೆರೆಯಾಗಿದ್ದರಿಂದ ಮರಿಗಳನ್ನು ಕಾಡಿನಲ್ಲೆ ಬಿಡುವ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿತ್ತು. ಅರಣ್ಯ ಇಲಾಖೆಯೂ ಕೊಂಬಿಂಗ್ ಮೂಲಕ ಅವುಗಳ ಚಲನವಲನದ ಮೇಲೆ ನಿಗಾ ವಹಿಸಿತ್ತು.

ಆದರೆ ಇದೀಗ ಕೂಂಬಿಂಗ್ ವೇಳೆ ಹುಲಿಮರಿಯೊಂದರ ಶವ ಪತ್ತೆಯಾಗಿದ್ದು, ಮತ್ತೊಂದು ಹುಲಿಯೊಡನೆ ಕಾದಾಡಿದ ಮರಿ ಹುಲಿಯು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ನಿಗಾವಹಿಸಲು ಕೂಂಬಿಂಗ್ ಮುಂದುವರಿಸುವುದಾಗಿ ಇಲಾಖೆ ಮಾಹಿತಿ ನೀಡಿದೆ.
ಮರಣೋತ್ತರ ಪರೀಕ್ಷೆಯ ನಂತರ ಹುಲಿಯ ಕಳೇಬರವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು. ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಪಶುವೈದ್ಯರಾದ ಡಾ.ಎಚ್.ರಮೇಶ್, ಡಾ.ಬಿ.ಬಿ.ಪ್ರಸನ್ನ, ಗೌರವ ವನ್ಯಜೀವಿ ಪರಿಪಾಲಕರು ಮತ್ತು ಎನ್‌ಟಿಸಿಎ ಪ್ರತಿನಿದಿಗಳಾದಕ್ಷಿ ಕೃತಿಕ ಆಲನಹಳ್ಳಿ, ಜೀವನ್ ಕೃಷ್ಣಪ್ಪ. ಅಂತರಸಂತೆ ಗ್ರಾಪಂ ಅಧ್ಯಕ್ಷ ಎಂ.ಸುಬ್ರಮಣ್ಯ, ವಲಯ ಅರಣ್ಯಾಧಿಕಾರಿ ಎಸ್.ಎಸ್.ಸಿದ್ಧರಾಜು ಮುಂತಾದವರು ಹಾಜರಿದ್ದರು.

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

56 mins ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

1 hour ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

1 hour ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

1 hour ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

2 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

2 hours ago