ಜಿಲ್ಲೆಗಳು

ತಾರಕ ಅರಣ್ಯ ಪ್ರದೇಶದಲ್ಲಿ ಗಂಡು ಹುಲಿಮರಿ ಸಾವು

ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ ಮೂಳೆ ಮುರಿದು ಹುಲಿಯು ಸಾವನ್ನಪ್ಪಿರುವ ಘಟನೆ ನಾಗರಹೊಳೆಯ ಅಂತರಸಂತೆ ವನ್ಯಜೀವಿ ವಲಯದ ತಾರಕ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಾಗರಹೊಳೆಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯದ ತಾರಕ ಗಸ್ತಿನ ಬಳಿಕ ಮೂರು ಮರಿಗಳನ್ನು ಹೊಂದಿದ್ದ ತಾಯಿ ಹುಲಿಯೊಂದು ಉರುಳುಗೆ ಸಿಲುಕಿ ಸಾವನ್ನಪ್ಪಿತ್ತು.

ಈ ವೇಳೆ ಅನಾಥವಾಗಿದ್ದ ಮೂರು ಮರಿಗಳನ್ನು ರಕ್ಷಣೆಗೆ ಅರಣ್ಯ ಇಲಾಖೆ ಕೊಂಬಿಂಗ್ ಕಾರಯಾಚರಣೆಯನ್ನು ಆರಂಭಿಸಿತ್ತು. ಈ ಸಂದರ್ಭದಲ್ಲಿ ಹುಲಿ ಮರಿಗಳು ಸ್ವತಃ ತಾವೇ ಜಿಂಕೆಯೊಂದನ್ನು ಬೇಟೆಯಾಡಿ ತಿನ್ನುತ್ತಿದ್ದ ದೃಶ್ಯ ಟ್ರಾಪ್ ಕ್ಯಾಮೆರಾಗೆ ಸೆರೆಯಾಗಿದ್ದರಿಂದ ಮರಿಗಳನ್ನು ಕಾಡಿನಲ್ಲೆ ಬಿಡುವ ನಿರ್ಧಾರಕ್ಕೆ ಅರಣ್ಯ ಇಲಾಖೆ ಬಂದಿತ್ತು. ಅರಣ್ಯ ಇಲಾಖೆಯೂ ಕೊಂಬಿಂಗ್ ಮೂಲಕ ಅವುಗಳ ಚಲನವಲನದ ಮೇಲೆ ನಿಗಾ ವಹಿಸಿತ್ತು.

ಆದರೆ ಇದೀಗ ಕೂಂಬಿಂಗ್ ವೇಳೆ ಹುಲಿಮರಿಯೊಂದರ ಶವ ಪತ್ತೆಯಾಗಿದ್ದು, ಮತ್ತೊಂದು ಹುಲಿಯೊಡನೆ ಕಾದಾಡಿದ ಮರಿ ಹುಲಿಯು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ನಿಗಾವಹಿಸಲು ಕೂಂಬಿಂಗ್ ಮುಂದುವರಿಸುವುದಾಗಿ ಇಲಾಖೆ ಮಾಹಿತಿ ನೀಡಿದೆ.
ಮರಣೋತ್ತರ ಪರೀಕ್ಷೆಯ ನಂತರ ಹುಲಿಯ ಕಳೇಬರವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು. ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಪಶುವೈದ್ಯರಾದ ಡಾ.ಎಚ್.ರಮೇಶ್, ಡಾ.ಬಿ.ಬಿ.ಪ್ರಸನ್ನ, ಗೌರವ ವನ್ಯಜೀವಿ ಪರಿಪಾಲಕರು ಮತ್ತು ಎನ್‌ಟಿಸಿಎ ಪ್ರತಿನಿದಿಗಳಾದಕ್ಷಿ ಕೃತಿಕ ಆಲನಹಳ್ಳಿ, ಜೀವನ್ ಕೃಷ್ಣಪ್ಪ. ಅಂತರಸಂತೆ ಗ್ರಾಪಂ ಅಧ್ಯಕ್ಷ ಎಂ.ಸುಬ್ರಮಣ್ಯ, ವಲಯ ಅರಣ್ಯಾಧಿಕಾರಿ ಎಸ್.ಎಸ್.ಸಿದ್ಧರಾಜು ಮುಂತಾದವರು ಹಾಜರಿದ್ದರು.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

10 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

11 hours ago