ಜಿಲ್ಲೆಗಳು

ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧನ

ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣಗಳಲ್ಲಿ ೧೮,೧೬,೫೦೦ ರೂ. ಬೆಲೆ ಬಾಳುವ ಸುಮಾರು ೩೦೫ ಗ್ರಾಂ ತೂಕದ ಚಿನ್ನಾಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್ ದ್ವಿಚಕ್ರ ವಾಹನ ಹಾಗೂ ಒಂದು ಬೊಲೆರೋ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ಅವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ಮತ್ತು ಅಶೋಕಪುರಂ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಸಬ್ ಇನ್‌ಸ್ಪೆಕ್ಟರ್ ಎಂ.ಕೆ.ಸ್ಮಿತಾ ಹಾಗೂ ಸಿಬ್ಬಂದಿಗಳಾದ ಪಿ.ಜೆ.ರಾಜು, ನಾರಾಯಣಶೆಟ್ಟಿ, ಎಚ್.ಜೆ.ಲೋಕೇಶ್, ಗಿರೀಶ್, ಮಹದೇವಯ್ಯ, ಬಸವರಾಜ ಮುನ್ಯಾಳ್, ಮಹೇಶ ಹಾಗೂ ಕೆ.ಆರ್.ವಿಭಾಗದ ಎಸಿಪಿ ಸ್ಕ್ವಾಡ್ ಸಿಬ್ಬಂದಿಗಳಾದ ಮೋಹನ್ ಕುಮಾರ್, ಸಾಗರ್, ಸುರೇಶ, ಹರೀಶ, ಮೇಘಾನಾಯಕ್, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಹರೀಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

 

andolana

Recent Posts

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

2 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

2 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

2 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

2 hours ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

14 hours ago