ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಪ್ರಕರಣಗಳಲ್ಲಿ ೧೮,೧೬,೫೦೦ ರೂ. ಬೆಲೆ ಬಾಳುವ ಸುಮಾರು ೩೦೫ ಗ್ರಾಂ ತೂಕದ ಚಿನ್ನಾಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್ ದ್ವಿಚಕ್ರ ವಾಹನ ಹಾಗೂ ಒಂದು ಬೊಲೆರೋ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಡಿಸಿಪಿ ಎಂ.ಎಸ್.ಗೀತಾ ಅವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ಮತ್ತು ಅಶೋಕಪುರಂ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್ಸ್ಪೆಕ್ಟರ್ ಸಿ.ಎಂ.ರವೀಂದ್ರ, ಸಬ್ ಇನ್ಸ್ಪೆಕ್ಟರ್ ಎಂ.ಕೆ.ಸ್ಮಿತಾ ಹಾಗೂ ಸಿಬ್ಬಂದಿಗಳಾದ ಪಿ.ಜೆ.ರಾಜು, ನಾರಾಯಣಶೆಟ್ಟಿ, ಎಚ್.ಜೆ.ಲೋಕೇಶ್, ಗಿರೀಶ್, ಮಹದೇವಯ್ಯ, ಬಸವರಾಜ ಮುನ್ಯಾಳ್, ಮಹೇಶ ಹಾಗೂ ಕೆ.ಆರ್.ವಿಭಾಗದ ಎಸಿಪಿ ಸ್ಕ್ವಾಡ್ ಸಿಬ್ಬಂದಿಗಳಾದ ಮೋಹನ್ ಕುಮಾರ್, ಸಾಗರ್, ಸುರೇಶ, ಹರೀಶ, ಮೇಘಾನಾಯಕ್, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಹರೀಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…