ಜಿಲ್ಲೆಗಳು

ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧನ

ಮೈಸೂರು: ಮನೆಗಳ್ಳತನ ಹಾಗೂ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ೧೮.೧೬ ಲಕ್ಷ ರೂ. ಬೆಲೆ ಬಾಳುವ ೩೦೫ ಗ್ರಾಂ ಚಿನ್ನದ ಆಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ಮತ್ತು ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣಗಳಲ್ಲಿ ೧೮,೧೬,೫೦೦ ರೂ. ಬೆಲೆ ಬಾಳುವ ಸುಮಾರು ೩೦೫ ಗ್ರಾಂ ತೂಕದ ಚಿನ್ನಾಭರಣಗಳು, ೧,೨೦೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಪಲ್ಸರ್ ದ್ವಿಚಕ್ರ ವಾಹನ ಹಾಗೂ ಒಂದು ಬೊಲೆರೋ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಡಿಸಿಪಿ ಎಂ.ಎಸ್.ಗೀತಾ ಅವರ ಮಾರ್ಗದರ್ಶನದಲ್ಲಿ ಕೃಷ್ಣರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ಸರಸ್ವತಿಪುರಂ ಪೊಲೀಸ್ ಠಾಣೆ ಮತ್ತು ಅಶೋಕಪುರಂ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಎಂ.ರವೀಂದ್ರ, ಸಬ್ ಇನ್‌ಸ್ಪೆಕ್ಟರ್ ಎಂ.ಕೆ.ಸ್ಮಿತಾ ಹಾಗೂ ಸಿಬ್ಬಂದಿಗಳಾದ ಪಿ.ಜೆ.ರಾಜು, ನಾರಾಯಣಶೆಟ್ಟಿ, ಎಚ್.ಜೆ.ಲೋಕೇಶ್, ಗಿರೀಶ್, ಮಹದೇವಯ್ಯ, ಬಸವರಾಜ ಮುನ್ಯಾಳ್, ಮಹೇಶ ಹಾಗೂ ಕೆ.ಆರ್.ವಿಭಾಗದ ಎಸಿಪಿ ಸ್ಕ್ವಾಡ್ ಸಿಬ್ಬಂದಿಗಳಾದ ಮೋಹನ್ ಕುಮಾರ್, ಸಾಗರ್, ಸುರೇಶ, ಹರೀಶ, ಮೇಘಾನಾಯಕ್, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಹರೀಶ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

 

andolana

Recent Posts

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

9 mins ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

19 mins ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

21 mins ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

26 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

4 hours ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

15 hours ago