ಜಿಲ್ಲೆಗಳು

ಬ್ಯಾಂಕ್‌ಗೆ ಸಿಬ್ಬಂದಿಗಳಿಂದಲೇ ಮೋಸ : ಮೂವರ ವಿರುದ್ಧ ದೂರು ದಾಖಲು !

ಮೈಸೂರು : ಎಸ್ ಬಿ ಐ ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು ಸಿಬ್ಬಂದಿಗಳ ವಿರುದ್ದ ವ್ಯವಸ್ಥಾಪಕರಾದ ಆರ್.ಡಿ.ಸುಂದರೇಶ್ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಂಕ್ ನ ಸ್ವಾಧೀನದಲ್ಲಿದ್ದ 45,48,052/- ರೂಗಳ ನಾಲ್ಕು ಡಿಡಿ ಗಳನ್ನ ರದ್ದುಪಡಿಸಿ ಬ್ಯಾಂಕ್ ನ ಪಾರ್ಕಿಂಗ್ ಖಾತೆಗೆ ವರ್ಗಾವಣೆ ಮಾಡಿ ನಂತದ ಸದರಿ ಹಣವನ್ನ ಗ್ರಾಹಕರಾದ ಕಾವ್ಯ,ಸಾನಿಯಾರಾವ್ ಹಾಗೂ ಪ್ರಭುದೇವ್ ಎಂಬುವರ ಎಸ್.ಬಿ.ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ನಂತರ ಅವರ ಅನುಮತಿ ಇಲ್ಲದೆ ಮೂವರ ಖಾತೆಯಿಂದ 30-03-2022 ರಂದು SBI ಮ್ಯೂಚುಯಲ್ ಫಂಡ್ ಗೆ ಟ್ರಾನ್ಫರ್ ಮಾಡಿದ್ದಾರೆ.ನಂತರ ಇದೇ ಹಣವನ್ನ 07-04-2022 ರಂದು ಮ್ಯೂಚುವೆಲ್ ಫಂಡ್ ನಿಂದ ಹಿಂಪಡೆದು ಗ್ರಾಹಕರ ಖಾತೆಗೆ ವರ್ಗಾವಣೆ ಮಾಡಿ ಮತ್ತೆ ಬ್ಯಾಂಕಿನ ಹೆಸರಿಗೆ ನಾಲ್ಕು ಡಿಡಿಗಳನ್ನ ಮಾಡಿ ಜಮಾ ಮಾಡಿದ್ದಾರೆ.

30-03-2022 ರಿಂದ 07-04-2022 ರವರೆಗೆ 45,48,052/- ರೂ ಹಣವನ್ನ ತಾತ್ಕಾಲಿಕವಾಗಿ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ವಂಚಿಸಿ ಗ್ರಾಹಕರ ಅನುಮತಿ ಇಲ್ಲದೆ ಮ್ಯೂಚುಯಲ್ ಫಂಡ್ ಗೆ ಇನ್ವೆಸ್ಟ್ ಮಾಡಿ ಪ್ರಾದೇಶಿಕ ಕಚೇರಿಗೆ ತಪ್ಪುಮಾಹಿತಿ ನೀಡಿರುವ ಮೂವರು ಸಿಬ್ಬಂದಿಗಳ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸುವಂತೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಮುಖ್ಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರ.

andolanait

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

1 min ago

ಎಸ್‌ಎಸ್‌ಎಲ್‌ಸಿ: ಜಿಲ್ಲೆಗೆ ಕೋಟೆ ಪ್ರಥಮ ಸ್ಥಾನ

ಮಂಜು ಕೋಟೆ ದಾಖಲೆ ಸೃಷ್ಟಿಸಿದ ಫಲಿತಾಂಶ; ಕ್ಷೇತ್ರ ಶಿಕ್ಷಣಾಧಿಕಾರಿ, ವಿದ್ಯಾರ್ಥಿ ವೇದಶ್ರೀ ಅವರಿಗೆ ಶಾಸಕರಿಂದ ಸನ್ಮಾನ  ಎಚ್.ಡಿ.ಕೋಟೆ: ತಾಲ್ಲೂಕಿನ ಇತಿಹಾಸದಲ್ಲಿ…

7 mins ago

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

9 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

9 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

9 hours ago