ಮೈಸೂರು : ಎಸ್ ಬಿ ಐ ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು ಸಿಬ್ಬಂದಿಗಳ ವಿರುದ್ದ ವ್ಯವಸ್ಥಾಪಕರಾದ ಆರ್.ಡಿ.ಸುಂದರೇಶ್ ಪ್ರಕರಣ ದಾಖಲಿಸಿದ್ದಾರೆ.
ಬ್ಯಾಂಕ್ ನ ಸ್ವಾಧೀನದಲ್ಲಿದ್ದ 45,48,052/- ರೂಗಳ ನಾಲ್ಕು ಡಿಡಿ ಗಳನ್ನ ರದ್ದುಪಡಿಸಿ ಬ್ಯಾಂಕ್ ನ ಪಾರ್ಕಿಂಗ್ ಖಾತೆಗೆ ವರ್ಗಾವಣೆ ಮಾಡಿ ನಂತದ ಸದರಿ ಹಣವನ್ನ ಗ್ರಾಹಕರಾದ ಕಾವ್ಯ,ಸಾನಿಯಾರಾವ್ ಹಾಗೂ ಪ್ರಭುದೇವ್ ಎಂಬುವರ ಎಸ್.ಬಿ.ಖಾತೆಗೆ ವರ್ಗಾವಣೆ ಮಾಡಿದ್ದಾರೆ.
ನಂತರ ಅವರ ಅನುಮತಿ ಇಲ್ಲದೆ ಮೂವರ ಖಾತೆಯಿಂದ 30-03-2022 ರಂದು SBI ಮ್ಯೂಚುಯಲ್ ಫಂಡ್ ಗೆ ಟ್ರಾನ್ಫರ್ ಮಾಡಿದ್ದಾರೆ.ನಂತರ ಇದೇ ಹಣವನ್ನ 07-04-2022 ರಂದು ಮ್ಯೂಚುವೆಲ್ ಫಂಡ್ ನಿಂದ ಹಿಂಪಡೆದು ಗ್ರಾಹಕರ ಖಾತೆಗೆ ವರ್ಗಾವಣೆ ಮಾಡಿ ಮತ್ತೆ ಬ್ಯಾಂಕಿನ ಹೆಸರಿಗೆ ನಾಲ್ಕು ಡಿಡಿಗಳನ್ನ ಮಾಡಿ ಜಮಾ ಮಾಡಿದ್ದಾರೆ.
30-03-2022 ರಿಂದ 07-04-2022 ರವರೆಗೆ 45,48,052/- ರೂ ಹಣವನ್ನ ತಾತ್ಕಾಲಿಕವಾಗಿ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ವಂಚಿಸಿ ಗ್ರಾಹಕರ ಅನುಮತಿ ಇಲ್ಲದೆ ಮ್ಯೂಚುಯಲ್ ಫಂಡ್ ಗೆ ಇನ್ವೆಸ್ಟ್ ಮಾಡಿ ಪ್ರಾದೇಶಿಕ ಕಚೇರಿಗೆ ತಪ್ಪುಮಾಹಿತಿ ನೀಡಿರುವ ಮೂವರು ಸಿಬ್ಬಂದಿಗಳ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸುವಂತೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಮುಖ್ಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರ.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…