ಜಿಲ್ಲೆಗಳು

ಚೆನ್ನಪ್ಪನಪುರ ವೀರಭದ್ರೇಶ್ವರ ರಥೋತ್ಸವದಲ್ಲಿ ಚಕ್ರ ಮುರಿದು, ಉರುಳಿ ಬಿದ್ದ ರಥ

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ರಥದ ಚಕ್ರ ಮುರಿದು ಬಿದ್ದು, ರಥ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.

ಅದೃಷ್ಟವಶಾತ್‍ ಯಾರಿಗೂ ಯಾವುದೇ ಅಪಾಯವಾಗಿಲ್ಲ. ನಾಲ್ಕು ವರ್ಷಗಳ ಬಳಿಕ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಬೆಳ್ಳಿ ಕವಚಧಾರಣಾ ಮಹೋತ್ಸವ ನಡೆದಿತ್ತು.

ಮಂಗಳವಾರ ಮಧ್ಯಾಹ್ನ 12ಕ್ಕೆ ದೇವಾಲಯದ ಹೊರಾವರಣದಲ್ಲಿ ರಥೋತ್ಸವ ಆರಂಭವಾಯಿತು. ರಥ ಸಾಗಿ ದೇವಾಲಯದ ಗರ್ಭ ಗುಡಿಯ ಹಿಂಭಾಗ ಬಂದಾಗ ಮಧ್ಯಾಹ್ನ 12.30ರಲ್ಲಿ ಚಕ್ರದ ದೂರಿ ಹಾಗೂ ಬಲಗಡೆಯ ಚಕ್ರ ಮುರಿದು ರಥ ವಾಲಿಕೊಂಡಿತು.

ಆ ಸಂದರ್ಭದಲ್ಲಿ ಪೊಲೀಸರು ರಥದ ಅಕ್ಕಪಕ್ಕ ಇದ್ದ ನೂರಾರು ಜನರನ್ನು ಚದುರಿಸಿದರು. ರಥದ ಗೋಪುರವನ್ನು ಹಗ್ಗದ ಸಹಾಯದಿಂದ ಹಿಡಿದುಕೊಳ್ಳಲಾಗಿತ್ತು.

ಹಗ್ಗದ ಆಧಾರದಿಂದ ನಿಂತಿದ್ದ ರಥ, ಹಗ್ಗವನ್ನು ನಿಧಾನವಾಗಿ ಸಡಿಲ ಬಿಟ್ಟಾಗ ಕೆಳಕ್ಕೆ ಉರುಳಿತು.

ಪೊಲೀಸರು ಜನರನ್ನು ದೂರ ಚದುರಿಸಿದ್ದರಿಂದ ಯಾರಿಗೂ ಯಾವುದೇ ಅಪಾಯ ಆಗಲಿಲ್ಲ.ರಥೋತ್ಸವ ಅಪೂರ್ಣಗೊಂಡರೂ, ಬೆಳ್ಳಿ ಕವಚಧಾರಣೆ, ಸ್ವಾಮಿಯ ದರ್ಶನ ನಡೆದವು. ವಿವಿಧೆಡೆಗಳಿಂದ ಸಾವಿರಾರು ಜನರು ಪಾಲ್ಗೊಂಡಿದ್ದರು.

ಒಂದೆರಡು ತಿಂಗಳ ಹಿಂದೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ದೇವಾಲಯದ ರಥೋತ್ಸವದ ಸಂದರ್ಭದಲ್ಲೂ ರಥ ವೇಗವಾಗಿ ಚಲಿಸಿ, ಅವಘಡ ಸಂಭವಿಸಿತ್ತು.

ಇದಕ್ಕೂ ಮೊದಲು, ಶಾಸಕ ಸಿ. ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

andolana

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

1 min ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago