ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ರಥದ ಚಕ್ರ ಮುರಿದು ಬಿದ್ದು, ರಥ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ನಾಲ್ಕು ವರ್ಷಗಳ ಬಳಿಕ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಬೆಳ್ಳಿ ಕವಚಧಾರಣಾ ಮಹೋತ್ಸವ ನಡೆದಿತ್ತು.
ಮಂಗಳವಾರ ಮಧ್ಯಾಹ್ನ 12ಕ್ಕೆ ದೇವಾಲಯದ ಹೊರಾವರಣದಲ್ಲಿ ರಥೋತ್ಸವ ಆರಂಭವಾಯಿತು. ರಥ ಸಾಗಿ ದೇವಾಲಯದ ಗರ್ಭ ಗುಡಿಯ ಹಿಂಭಾಗ ಬಂದಾಗ ಮಧ್ಯಾಹ್ನ 12.30ರಲ್ಲಿ ಚಕ್ರದ ದೂರಿ ಹಾಗೂ ಬಲಗಡೆಯ ಚಕ್ರ ಮುರಿದು ರಥ ವಾಲಿಕೊಂಡಿತು.
ಆ ಸಂದರ್ಭದಲ್ಲಿ ಪೊಲೀಸರು ರಥದ ಅಕ್ಕಪಕ್ಕ ಇದ್ದ ನೂರಾರು ಜನರನ್ನು ಚದುರಿಸಿದರು. ರಥದ ಗೋಪುರವನ್ನು ಹಗ್ಗದ ಸಹಾಯದಿಂದ ಹಿಡಿದುಕೊಳ್ಳಲಾಗಿತ್ತು.
ಹಗ್ಗದ ಆಧಾರದಿಂದ ನಿಂತಿದ್ದ ರಥ, ಹಗ್ಗವನ್ನು ನಿಧಾನವಾಗಿ ಸಡಿಲ ಬಿಟ್ಟಾಗ ಕೆಳಕ್ಕೆ ಉರುಳಿತು.
ಪೊಲೀಸರು ಜನರನ್ನು ದೂರ ಚದುರಿಸಿದ್ದರಿಂದ ಯಾರಿಗೂ ಯಾವುದೇ ಅಪಾಯ ಆಗಲಿಲ್ಲ.ರಥೋತ್ಸವ ಅಪೂರ್ಣಗೊಂಡರೂ, ಬೆಳ್ಳಿ ಕವಚಧಾರಣೆ, ಸ್ವಾಮಿಯ ದರ್ಶನ ನಡೆದವು. ವಿವಿಧೆಡೆಗಳಿಂದ ಸಾವಿರಾರು ಜನರು ಪಾಲ್ಗೊಂಡಿದ್ದರು.
ಒಂದೆರಡು ತಿಂಗಳ ಹಿಂದೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ದೇವಾಲಯದ ರಥೋತ್ಸವದ ಸಂದರ್ಭದಲ್ಲೂ ರಥ ವೇಗವಾಗಿ ಚಲಿಸಿ, ಅವಘಡ ಸಂಭವಿಸಿತ್ತು.
ಇದಕ್ಕೂ ಮೊದಲು, ಶಾಸಕ ಸಿ. ಪುಟ್ಟರಂಗಶೆಟ್ಟಿ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…