ಜಿಲ್ಲೆಗಳು

ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ

ಮೈಸೂರು: ಪೌರ ಕಾರ್ಮಿಕರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸುವ ಉದ್ದೇಶದಿಂದ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ರಾಜೇಂದ್ರ ಅವರು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಪೌರ ಕಾರ್ಮಿಕ ಮುಖಂಡರು, ಪೌರ ಕಾರ್ಮಿಕರ ನೇಮಕಾತಿ ವೇಳೆ ರೋಸ್ಟರ್ ಪದ್ದತಿಯನ್ನು ರದ್ದು ಮಾಡಬೇಕು. ೭೦೦ ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಹುದ್ದೆಗೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಮೈಸೂರಿನ ಜನಸಂಖ್ಯೆ ೧೦ ಲಕ್ಷವನ್ನು ದಾಟಿದ್ದು, ಹಾಲಿ ಇರುವ ಪೌರ ಕಾರ್ಮಿಕರಿಗೆ ಹೆಚ್ಚಿನ ಹೊರೆಯಾಗುತ್ತಿದೆ. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ನೇಮಕಾತಿ ನಡೆಯಬೇಕು. ಸೇವೆಯಲ್ಲಿರುವ ಪೌರಕಾರ್ಮಿಕರು ಮೃತರಾದಲ್ಲಿ ಅವರಿಗೆ ೧೦ ಲಕ್ಷ ರೂ. ಪರಿಹಾರ ಹಾಗೂ ಅವರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಹೇಳಿದರು.

ನಗರಪಾಲಿಕೆಗೆ ಸೇರಿದ ಮಳಲವಾಡಿ ಗ್ರಾಮದಲ್ಲಿ ೧೫೮ ಮಂದಿ ಪೌರ ಕಾರ್ಮಿಕರಿಗೆ ಜಿ ಪ್ಲಸ್ ಮಾದರಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡಬೇಕು. ಮನೆಮನೆ ಕಸ ಸಂಗ್ರಹಿಸುವ ಕೆಲಸದಲ್ಲಿರುವ ೨೫೦ಕ್ಕೂ ಹೆಚ್ಚು ನೌಕರರನ್ನು ಖಾಯಂಗೊಳಿಸಬೇಕು ಎಂದು ಮನವಿ ಮಾಡಿದರು.

ದಿನನಿತ್ಯ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಗುರುತಿನ ಚೀಟಿ, ಇಎಸ್‌ಐ, ಪಿಎಫ್, ಬೆಳಗಿನ ಉಪಹಾರ, ಸಂಕಷ್ಟ ಭತ್ಯೆ ನೀಡಬೇಕು. ಅಭಯ ವಾಹನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೧೨ ಮಂದಿ ಚಾಲಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.ಕಡಕೊಳ ಪಟ್ಟಣ ಪಂಚಾಯ್ತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಪೌರ ಕಾರ್ಮಿಕರನ್ನು ನೇಕಮ ಮಾಡಿಲ್ಲ. ಇದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವವರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪೌರ ಕಾರ್ಮಿಕರ ಸಮಸ್ಯೆಗಳನ್ನು ಸಮಾಧಾನದಿಂದಲೇ ಆಲಿಸಿದ ಜಿಲಾಧಿಕಾರಿ ಕೆ.ವಿ.ರಾಜೇಂದ್ರ ಅವರು, ಪೌರಕಾರ್ಮಿಕರ ಅಗತ್ಯತೆಗಳನ್ನು ಪೂರೈಸಲು ಸರ್ಕಾರ ಬದ್ದವಿದೆ. ಈ ಸಂಬಂದ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ವಿವಿರವನ್ನು ಒದಗಿಸಬೇಕು ಎಂದು ಹೇಳಿದರು.

ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ಕಾರ್ಯಾಧ್ಯಕ್ಷ ಮಂಚಯ್ಯ, ಪ್ರಧಾನ ಕಾರ್ಯದರ್ಶಿ ದಿನೇಶ್‌ಕುಮಾರ್, ಉಪಾಧ್ಯಕ್ಷ ಜಿ.ಎನ್.ಚಾಮ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

andolana

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

7 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago