ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ
ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ ದಾಳಿಯಿಂದ ಆಗಿಲ್ಲ, ಅದು ಸಾವಿಗೀಡಾಗಿರುವುದು ನಾಯಿಗಳ ದಾಳಿಯಿಂದ ಎಂದು ಖಾತ್ರಿ ಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ ರಾಮಕೃಷ್ಣನಗರದ ದಿಗಂತ ಭವನದ ಬಳಿ ಕರುವೊಂದರ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಸ್ಥಳೀಯರು ಭಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬೆಳಿಗ್ಗೆ ೬.೩೦ಕ್ಕೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳವನ್ನು ಪರಿಶೀಲನೆ ನಡೆಸಿದಾಗ ಅಲ್ಲಿ ಕೆಲವು ಹೆಜ್ಜೆ ಗುರುತುಗಳು ಇದ್ದವು. ಇದು ಚಿರತೆಯದಲ್ಲ ಎಂದು ಇಲಾಖೆಯ ಸಿಬ್ಬಂದಿ ಹೇಳಿದರೂ ಸ್ಥಳೀಯರು, ಚಿರತೆಯದ್ದೇ ಎಂದು ವಾದ ಮಾಡಲು ಆರಂಭಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಜಿ.ಟಿ.ದೇವೇಗೌಡ ಸ್ಥಳೀಯರಿಗೆ ಧೈರ್ಯ ಹೇಳಿದರು.
ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ದಿಗಂತ ಭವನದಲ್ಲಿ ಅಳವಡಿಸಿರಲಾಗಿರುವ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಬೆಳಗಿನ ಜಾವ ಸುಮಾರು ೪.೨೦ರ ಸಮಯದಲ್ಲಿ ನಾಲ್ಕು ನಾಯಿಗಳು ಕರುವಿನ ಮೇಲೆ ದಾಳಿ ಮಾಡಿರುವುದು ತಿಳಿದುಬಂದಿದೆ. ಈ ಮೂಲಕ ಜನರಲ್ಲಿದ್ದ ಆತಂಕವನ್ನು ನಿವಾರಿಸಲಾಗಿದೆ.
ಎರಡು ದಿನಗಳ ಹಿಂದೆ ನಗರದ ಕೆ.ಸಿ.ಬಡಾವಣೆಯಲ್ಲಿಯೂ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಅಲ್ಲಿ ಬೋನ್ ಇಡಲಾಗಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…