ಜಿಲ್ಲೆಗಳು

ಕರು ಸಾವು ಚಿರತೆಯಿಂದಲ್ಲ, ನಾಯಿಗಳಿಂದ!

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ

ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ ದಾಳಿಯಿಂದ ಆಗಿಲ್ಲ, ಅದು ಸಾವಿಗೀಡಾಗಿರುವುದು ನಾಯಿಗಳ ದಾಳಿಯಿಂದ ಎಂದು ಖಾತ್ರಿ ಪಡಿಸಿದ್ದಾರೆ.

ಭಾನುವಾರ ಬೆಳಿಗ್ಗೆ ರಾಮಕೃಷ್ಣನಗರದ ದಿಗಂತ ಭವನದ ಬಳಿ ಕರುವೊಂದರ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಸ್ಥಳೀಯರು ಭಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬೆಳಿಗ್ಗೆ ೬.೩೦ಕ್ಕೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳವನ್ನು ಪರಿಶೀಲನೆ ನಡೆಸಿದಾಗ ಅಲ್ಲಿ ಕೆಲವು ಹೆಜ್ಜೆ ಗುರುತುಗಳು ಇದ್ದವು. ಇದು ಚಿರತೆಯದಲ್ಲ ಎಂದು ಇಲಾಖೆಯ ಸಿಬ್ಬಂದಿ ಹೇಳಿದರೂ ಸ್ಥಳೀಯರು, ಚಿರತೆಯದ್ದೇ ಎಂದು ವಾದ ಮಾಡಲು ಆರಂಭಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಜಿ.ಟಿ.ದೇವೇಗೌಡ ಸ್ಥಳೀಯರಿಗೆ ಧೈರ್ಯ ಹೇಳಿದರು.

ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ದಿಗಂತ ಭವನದಲ್ಲಿ ಅಳವಡಿಸಿರಲಾಗಿರುವ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಬೆಳಗಿನ ಜಾವ ಸುಮಾರು ೪.೨೦ರ ಸಮಯದಲ್ಲಿ ನಾಲ್ಕು ನಾಯಿಗಳು ಕರುವಿನ ಮೇಲೆ ದಾಳಿ ಮಾಡಿರುವುದು ತಿಳಿದುಬಂದಿದೆ. ಈ ಮೂಲಕ ಜನರಲ್ಲಿದ್ದ ಆತಂಕವನ್ನು ನಿವಾರಿಸಲಾಗಿದೆ.

ಎರಡು ದಿನಗಳ ಹಿಂದೆ ನಗರದ ಕೆ.ಸಿ.ಬಡಾವಣೆಯಲ್ಲಿಯೂ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಅಲ್ಲಿ ಬೋನ್ ಇಡಲಾಗಿದೆ.

andolanait

Recent Posts

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

2 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

2 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

3 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

3 hours ago