ಜಿಲ್ಲೆಗಳು

ಕರು ಸಾವು ಚಿರತೆಯಿಂದಲ್ಲ, ನಾಯಿಗಳಿಂದ!

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ

ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ ದಾಳಿಯಿಂದ ಆಗಿಲ್ಲ, ಅದು ಸಾವಿಗೀಡಾಗಿರುವುದು ನಾಯಿಗಳ ದಾಳಿಯಿಂದ ಎಂದು ಖಾತ್ರಿ ಪಡಿಸಿದ್ದಾರೆ.

ಭಾನುವಾರ ಬೆಳಿಗ್ಗೆ ರಾಮಕೃಷ್ಣನಗರದ ದಿಗಂತ ಭವನದ ಬಳಿ ಕರುವೊಂದರ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಸ್ಥಳೀಯರು ಭಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬೆಳಿಗ್ಗೆ ೬.೩೦ಕ್ಕೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳವನ್ನು ಪರಿಶೀಲನೆ ನಡೆಸಿದಾಗ ಅಲ್ಲಿ ಕೆಲವು ಹೆಜ್ಜೆ ಗುರುತುಗಳು ಇದ್ದವು. ಇದು ಚಿರತೆಯದಲ್ಲ ಎಂದು ಇಲಾಖೆಯ ಸಿಬ್ಬಂದಿ ಹೇಳಿದರೂ ಸ್ಥಳೀಯರು, ಚಿರತೆಯದ್ದೇ ಎಂದು ವಾದ ಮಾಡಲು ಆರಂಭಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಜಿ.ಟಿ.ದೇವೇಗೌಡ ಸ್ಥಳೀಯರಿಗೆ ಧೈರ್ಯ ಹೇಳಿದರು.

ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ದಿಗಂತ ಭವನದಲ್ಲಿ ಅಳವಡಿಸಿರಲಾಗಿರುವ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಬೆಳಗಿನ ಜಾವ ಸುಮಾರು ೪.೨೦ರ ಸಮಯದಲ್ಲಿ ನಾಲ್ಕು ನಾಯಿಗಳು ಕರುವಿನ ಮೇಲೆ ದಾಳಿ ಮಾಡಿರುವುದು ತಿಳಿದುಬಂದಿದೆ. ಈ ಮೂಲಕ ಜನರಲ್ಲಿದ್ದ ಆತಂಕವನ್ನು ನಿವಾರಿಸಲಾಗಿದೆ.

ಎರಡು ದಿನಗಳ ಹಿಂದೆ ನಗರದ ಕೆ.ಸಿ.ಬಡಾವಣೆಯಲ್ಲಿಯೂ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಅಲ್ಲಿ ಬೋನ್ ಇಡಲಾಗಿದೆ.

andolanait

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

10 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

11 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

12 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

13 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

13 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago