ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ
ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ ದಾಳಿಯಿಂದ ಆಗಿಲ್ಲ, ಅದು ಸಾವಿಗೀಡಾಗಿರುವುದು ನಾಯಿಗಳ ದಾಳಿಯಿಂದ ಎಂದು ಖಾತ್ರಿ ಪಡಿಸಿದ್ದಾರೆ.
ಭಾನುವಾರ ಬೆಳಿಗ್ಗೆ ರಾಮಕೃಷ್ಣನಗರದ ದಿಗಂತ ಭವನದ ಬಳಿ ಕರುವೊಂದರ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಸ್ಥಳೀಯರು ಭಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬೆಳಿಗ್ಗೆ ೬.೩೦ಕ್ಕೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳವನ್ನು ಪರಿಶೀಲನೆ ನಡೆಸಿದಾಗ ಅಲ್ಲಿ ಕೆಲವು ಹೆಜ್ಜೆ ಗುರುತುಗಳು ಇದ್ದವು. ಇದು ಚಿರತೆಯದಲ್ಲ ಎಂದು ಇಲಾಖೆಯ ಸಿಬ್ಬಂದಿ ಹೇಳಿದರೂ ಸ್ಥಳೀಯರು, ಚಿರತೆಯದ್ದೇ ಎಂದು ವಾದ ಮಾಡಲು ಆರಂಭಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಶಾಸಕ ಜಿ.ಟಿ.ದೇವೇಗೌಡ ಸ್ಥಳೀಯರಿಗೆ ಧೈರ್ಯ ಹೇಳಿದರು.
ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ದಿಗಂತ ಭವನದಲ್ಲಿ ಅಳವಡಿಸಿರಲಾಗಿರುವ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಬೆಳಗಿನ ಜಾವ ಸುಮಾರು ೪.೨೦ರ ಸಮಯದಲ್ಲಿ ನಾಲ್ಕು ನಾಯಿಗಳು ಕರುವಿನ ಮೇಲೆ ದಾಳಿ ಮಾಡಿರುವುದು ತಿಳಿದುಬಂದಿದೆ. ಈ ಮೂಲಕ ಜನರಲ್ಲಿದ್ದ ಆತಂಕವನ್ನು ನಿವಾರಿಸಲಾಗಿದೆ.
ಎರಡು ದಿನಗಳ ಹಿಂದೆ ನಗರದ ಕೆ.ಸಿ.ಬಡಾವಣೆಯಲ್ಲಿಯೂ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಅಲ್ಲಿ ಬೋನ್ ಇಡಲಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…