ಜಿಲ್ಲೆಗಳು

ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ… ಮಂಡ್ಯದಲ್ಲಿ ರೈತ ಸಂಘ ಪ್ರತಿಭಟನೆ

ಚಳಿ ಮಳೆ ಬಿಸಿಲೆನ್ನದೆ ೧೭ನೇ ದಿನದಲ್ಲಿ ಮುಂದುವರೆದ ರೈತರ ಧರಣಿ

ಹೇಮಂತ್‌ಕುಮಾರ್

ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಕಬ್ಬಿಗೆ ಹಾಗೂ ಹಾಲಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ೧೭ನೇ ದಿನಕ್ಕೆ ಕಾಲಿರಿಸಿದೆ.

ಆದರೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚವ ಕೆ.ಗೋಪಾಲಯ್ಯ ಅವರು ಧರಣಿ ನಿರತರನ್ನು ಭೇಟಿ ಮಾಡಿ ಮಾತನಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸಬೇಕೆಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತಸಂಘಟನೆ ಕಾರ್ಯಕರ್ತರು ನಡೆಸಿದ ಧರಣಿ ೪೬ ದಿನಗಳ ಕಾಲ ನಡೆದಿತ್ತು. ಕೊನೆಗೆ ಮುಖ್ಯಮಂತ್ರಿಗಳೇ ಧರಣಿ ಸ್ಥಳಕ್ಕೆ ಆಗಮಿಸಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಆರಂಭಿಸುವುದಾಗಿ ಹೇಳಿ ಧರಣಿ ಅಂತ್ಯಗೊಳಿಸಿದ್ದರು.

ಬಳಿಕ ಅವರು ಮಾತುಕೊಟ್ಟಂತೆಯೇ ಬಜೆಟ್‌ನಲ್ಲಿ ಮೈಶುಗರ್ ಕಾರ್ಖಾನೆಗೆ ೫೦ ಕೋಟಿ ರೂ. ಅನುದಾನ ಒದಗಿಸಿ ಸರ್ಕಾರಿ ಸ್ವಾಮ್ಯದಲ್ಲಿಯೇ ಕಾರ್ಖಾನೆ ಆರಂಭಿಸಿ ಕೊಟ್ಟ ಮಾತಿನಂತೆಯೇ ನಡೆದುಕೊಂಡಿದ್ದರು. ಇದು ರೈತರ ಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ರಾಜ್ಯ ರೈತಸಂಘಟನೆ ಎಸ್.ಸಿ.ಮಧುಚಂದನ್ ನೇತೃತ್ವದಲ್ಲಿ ಟನ್ ಕಬ್ಬಿಗೆ ೪೫೦೦ ರೂ. ನೀಡಬೇಕು ಮತ್ತು ಲೀಟರ್ ಹಾಲಿಗೆ ೪೦ ರೂ. ಘೋಷಣೆ ಮಾಡಬೇಕೆಂದು ಆರಂಭಿಸಿರುವ ಅಹೋರಾತ್ರಿ ಧರಣಿ ೧೭ನೇ ದಿನದಲ್ಲಿ ನಡೆದಿದೆ.

ಇದುವರೆಗೆ ಸಚಿವ ಕೆ.ಸಿ.ನಾರಾಯಣಗೌಡ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದೆ ಸುಮಲತಾ, ವಿಧಾನಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ, ಮಧು ಜಿ.ಮಾದೇಗೌಡ, ಜಿಲ್ಲಾಧಿಕಾರಿ ಗೊಪಾಲಕೃಷ್ಣ, ಜಾ.ದಳ ಮುಖಂಡರಾದ ಎಚ್.ಎನ್.ಯೋಗೇಶ್, ವಕ್ತಾರರಾದ ಮಹಾಲಿಂಗೇಗೌಡ ಮುದ್ದನಘಟ್ಟ ಸೇರಿದಂತೆ ಅನೇಕ ಗಣ್ಯರು ಧರಣಿ ನಿರತರನ್ನು ಭೇಟಿಯಾಗಿ ಮನವಿ ಆಲಿಸಿದ್ದಾರೆ.

ಇಷ್ಟಾದರೂ ಜಿಲ್ಲೆಯ ಉಸ್ತುವಾರಿ ಹೊಣೆ ಹೊತ್ತ ಕೆ.ಗೋಪಾಲಯ್ಯ ಸ್ಥಳಕ್ಕೆ ಬಂದು ಮನವಿ ಆಲಿಸಲಿಲ್ಲ ಎಂಬ ಸಿಟ್ಟು ಪ್ರತಿಭಟನಾ ನಿರತರಲ್ಲಿ ಮಡುಗಟ್ಟಿದೆ. ಹಾಗಾಗಿ ಇದೀಗ ಧರಣಿ ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂಬ ಫ್ಲೆಕ್ಸ್ ಅಳವಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಂಡವಪುರ ತಾಲ್ಲೂಕು ರೈತಸಂಘದ ಕಾರ್ಯಕರ್ತರು ಸುನಿತಾಪುಟ್ಟಣ್ಣಯ್ಯ ನೇತೃತ್ವದಲ್ಲಿ ಪಾಲ್ಗೊಂಡು ಹೋರಾಟ ಬೆಂಬಲಿಸಿ, ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಕೃಷಿಯನ್ನು ತ್ಯಜಿಸಿ ಎಲ್ಲರೂ ಕೂಡ ಕೆಲಸಕ್ಕಾಗಿ ಬೆಂಗಳೂರಿನAತಹ ಮಹಾನಗರಗಳಿಗೆ ಹೋಗುತ್ತಿದ್ದಾರೆ. ಇದರಿಂದಾಗಿ ಹಳ್ಳಿಗಳು ವೃದ್ಧರಿಂದ ಕೂಡಿದ್ದು, ಕೃಷಿಯನ್ನು ಮಾಡುವವರೇ ಇಲ್ಲದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆಟೋ, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ವೇದಿಕೆ ಹಾಗೂ ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳು ಅಹೋರಾತ್ರಿ ಧರಣಿಗೆ ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ನಿರ್ಲಕ್ಷö್ಯದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ, ಕಳೆದ ೧೭ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಸರ್ಕಾರದ ಪ್ರತಿನಿಧಿಯಾಗಲಿ ಧರಣಿ ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಕೇಳಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಧರಣಿ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಿ, ಸರ್ಕಾರಕ್ಕೆ ತಿಳಿಸಬೇಕು. ಅಲ್ಲದೆ, ಸಭೆಗೆ ದಿನಾಂಕ ನಿಗದಿಪಡಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಧರಣಿಯು ಉಗ್ರರೂಪ ತಳೆಯಲಿದೆ ಎಂದು ಎಚ್ಚರಿಸಿದ್ದಾರೆ.

ಜನವಾದಿ ಮಹಿಳಾ ಸಂಘಟನೆಯ ಸುಶೀಲ, ಲತಾ, ಶೋಭಾ, ರಾಣಿ, ಮಂಜುಳಾ, ಆಟೋ ಚಾಲಕರಾದ ಟಿ.ಕೃಷ್ಣ, ರವೀಂದ್ರ, ಸತ್ಯನಾರಾಯಣ, ರಾಜು, ನಾರಾಯಣ, ನವಾಬ್‌ಜಾನ್, ಮಹೇಶ್, ಗುರುಶಂಕರ್, ಜಯಶಂಕರ್, ಶಿವ, ನಾಗೇಂದ್ರ, ಮತ್ತು ಪಾಲ್ಗೊಂಡಿದ್ದರು.

ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಕಬ್ಬಿಗೆ ಹಾಗೂ ಹಾಲಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ೧೭ನೇ ದಿನಕ್ಕೆ ಕಾಲಿರಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

andolana

Recent Posts

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…

7 mins ago

ಬೆಂಗಳೂರಿನಲ್ಲಿ ಜೂನಿಯರ್‌ ಎನ್‌ಟಿಆರ್‌ ನೋಡಲು ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…

28 mins ago

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

2 hours ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

2 hours ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

3 hours ago