ಜಿಲ್ಲೆಗಳು

ದೂರು ಮೂಟೆ ಹೊತ್ತು ಪಾಲಿಕೆ ಅದಾಲತ್ ಅಂತ್ಯ

ಮೇಯರ್ ಅಧ್ಯಕ್ಷತೆಯಲ್ಲಿ 8,9 ರ ಕಚೇರಿಯಲ್ಲಿ ಅದಾಲತ್; ಅಹವಾಲುಗಳ ಸುರಿಮಳೆ

ಮೈಸೂರು: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ನಗರಪಾಲಿಕೆ ವಲಯವಾರು ಆರಂಭಿಸಿರುವ ಅದಾಲತ್‌ನ್ನು ಮಂಗಳವಾರ ವಲಯ ಕಚೇರಿ ೮ರ ಉದಯಗಿರಿ ಮತ್ತು 9ರ ಗಾಯತ್ರಿಪುರಂ ಕಚೇರಿಯಲ್ಲಿ ಮಹಾಪೌರ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಸಿದಾಗ ಅವಹಾಲುಗಳ ಮಹಾಪೂರವೇ ಹರಿದುಬಂದಿತು.

ವಲಯ ಕಚೇರಿ ೮ರಲ್ಲಿ ನಡೆದ ಅದಾಲತ್‌ನಲ್ಲಿ ಅಹವಾಲು ಸಲ್ಲಿಸಿದ ರಾಘವೇಂದ್ರನಗರದ ನಿವಾಸಿ ಮುದ್ದಯ್ಯ ಎಂಬವರು, ನೀರಿನ ಬಾಕಿಯನ್ನು ಒಂದೇ ಕಂತಿನಲ್ಲಿ ಕಟ್ಟಲು ಹೇಳಿರುವುದರಿಂದ ತುಂಬಾ ತೊಂದರೆಯಾಗಿದೆ. ೨೦ ಸಾವಿರ ರೂ. ಬಾಕಿ ಇರುವುದರಿಂದ ಒಂದೇ ಕಂತಿನಲ್ಲಿ ಕಟ್ಟಲು ಸಾಧ್ಯವಿಲ್ಲ. ಎರಡು-ಮೂರು ಕಂತುಗಳಲ್ಲಿ ಕಟ್ಟಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಇದೇ ರೀತಿ ೧೦ರಿಂದ ೨೫ ಸಾವಿರ ರೂ.ವರೆಗೂ ಬಿಲ್ ಬಾಕಿ ಉಳಿಸಿಕೊಂಡಿರುವ ರಾಮಸ್ವಾಮಿ, ಮುನಿರಾಜು, ಮಾದಮ್ಮ ಎಂಬವರೂ ಮೂರ್ನಾಲ್ಕು ಕಂತಿನಲ್ಲಿ ಬಾಕಿ ಪಾವತಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮಹಾಪೌರರು ಆಯುಕ್ತರು ಸೇರಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವಕಾಶ ಇದ್ದಲ್ಲಿ ಎರಡು-ಮೂರು ಕಂತುಗಳಲ್ಲಿ ಪಾವತಿಗೆ ಅವಕಾಶ ಕೊಡಲಾಗುವುದು ಎಂದು ಭರವಸೆ ನೀಡಿದರು.

ಕುಡಿಯುವ ನೀರಿನ ಮೀಟರ್‌ಗಳನ್ನು ಬದಲಿಸದೆ ಬಿಲ್ ಹೆಚ್ಚಾಗಿ ಬರುತ್ತಿರುವ ದೂರನ್ನು ಪರಿಗಣಿಸಿದ ಮಹಾಪೌರರು, ಹಳೆಯ ಪ್ರದೇಶಗಳಲ್ಲಿ ಅಳವಡಿಸಿರುವ ಮೀಟರ್‌ಗಳಲ್ಲಿ ತಾಂತ್ರಿಕ ದೋಷವಿದ್ದಲ್ಲಿ ಅದನ್ನು ಬದಲಾಯಿಸಬೇಕು. ನಿಗದಿಗಿಂತ ಜಾಸ್ತಿ ಬಂದಿರುವ ಬಿಲ್‌ಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿ ಸೂಚನೆ ನೀಡಿದರು. ಗಾಯತ್ರಿಪುರಂ ನಿವಾಸಿ ತಂಗಮಣಿ ಎಂಬವರು ಪೌರಕಾರ್ಮಿಕರ ಕಾಲೋನಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು, ದೂರದ ಬಡಾವಣೆಗಳಿಗೆ ಸ್ವಚ್ಛತಾ ಕಾರ್ಯಕ್ಕೆ ಹೋಗುವವರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಕ್ಯಾತಮಾರನಹಳ್ಳಿಯ ನಿವಾಸಿಯೊಬ್ಬರು ಯುಜಿಡಿ ಲೇನ್ ಒಡೆದರೆ ತಕ್ಷಣ ಬಂದು ದುರಸ್ತಿಪಡಿಸುವುದಿಲ್ಲ. ಇದರಿಂದಾಗಿ ಸಾರ್ವಜನಿಕರು ದುರ್ವಾಸನೆಯಲ್ಲೇ ಓಡಾಡುವಂತಾಗಿದೆ ಎಂದು ದೂರಿದರು. ಆಗ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಹಾಪೌರರು, ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ತಂದೆ ಹೆಸರಿನಲ್ಲಿರುವ ಆಸ್ತಿಯ ಖಾತೆಯನ್ನು ಬದಲಾಯಿಸಿಕೊಡಲು ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರೂ ಆರು ತಿಂಗಳಿಂದ ಮಾಡಿಕೊಟ್ಟಿಲ್ಲ. ನಾವು ಕೆಲಸ ಬಿಟ್ಟು ಎಷ್ಟು ದಿನ ಅಲೆಯುವುದು ಎಂದು ಸೀತಮ್ಮ ಎಂಬವರು ಅಳಲು ತೋಡಿಕೊಂಡರು. ಇದರಿಂದ ಅಸಮಾಧಾನಗೊಂಡ ಮಹಾಪೌರರು ಖಾತೆ ವಿಭಾಗದ ಸಿಬ್ಬಂದಿಯನ್ನು ತರಾಟೆಗೆ ತಗೆದುಕೊಂಡು, ಮೂರು ದಿನಗಳಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿದರು.

ಉಪ ಮಹಾಪೌರರಾದ ಡಾ.ಎಂ.ಜಿ.ರೂಪಾ, ಸದಸ್ಯರಾದ ಶ್ರೀಧರ್, ಎಚ್.ಎಂ.ಶಾಂತಕುಮಾರಿ, ಉಷಾ ನಾರಾಯಣಪ್ಪ, ಸಾತ್ವಿಕ್, ಸಾವುದ್ ಖಾನ್, ಪುಷ್ಪಲತಾ ಜಗನ್ನಾಥ್, ಬಷೀರ್ ಅಹ್ಮದ್, ಅಯಾಜ್ ಪಾಷ, ವಲಯ ಆಯುಕ್ತರಾದ ಶಿವಕುಮಾರ್, ಕೃಷ್ಣ ಇನ್ನಿತರರು ಹಾಜರಿದ್ದರು.


ಸಾರ್ವಜನಿಕ ಅಹವಾಲುಗಳೇನು?

* ಕಂತುಗಳಲ್ಲಿ ಅಸಲು ಪಾವತಿಗೆ ಅವಕಾಶ ಕೊಡಿ

* ನೀರಿನ ಮೀಟರ್ ಪರಿಶೀಲಿಸಿ

* ಹಾಳಾಗಿರುವ ಒಳಚರಂಡಿ ಸರಿಪಡಿಸಿ

* ಖಾತೆ ಮಾಡಿಕೊಡಲು ಅರ್ಜಿ ಕೊಟ್ಟು ಆರು ತಿಂಗಳಾದರೂ ಖಾತೆ ಬದಲಾಗಿಲ್ಲ

* ಕಚೇರಿಗೆ ಮನೆ ಕಂದಾಯ ಕಟ್ಟಲು ಬಂದರೂ ಸಿಬ್ಬಂದಿ ಸಿಗುವುದೇ ಇಲ್ಲ

andolanait

Recent Posts

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

54 mins ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

3 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

4 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

5 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

11 hours ago